ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ, ‘ರಾಜ್ಯದ ಸಮಗ್ರ ಅಭಿವೃದ್ಧಿಗೆ ನೀಲ ನಕ್ಷೆ ರೂಪಿಸಲಾಗಿದೆ. ಬಡತನ ನಿವಾರಣೆಗೆ ಸಂಪೂರ್ಣವಾಗಿ ಮದ್ಯ ನಿಷೇಧ, ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ, ನಿರುದ್ಯೋಗಿ ಪದವೀಧರರಿಗೆ ಮಾಸಾಶನ, ಬಿಬಿಎಂಪಿ ಕಚೇರಿಗಳಲ್ಲಿ ಪಾರದರ್ಶಕತೆ, ಭ್ರಷ್ಟಾಚಾರಕ್ಕೆ ಕಡಿವಾಣ, ನೀರಿನ ಸದ್ಬಳಕೆ ಸೇರಿದಂತೆ ವಿವಿಧ ಯೋಜನೆಗಳು ಇದರಲ್ಲಿ ಸೇರಿವೆ’ ಎಂದು ಮಾಹಿತಿ ನೀಡಿದರು.