ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ವಿರೋಧಿಸಿ ಪ್ರತಿಭಟನೆಗೆ ಮುಂದಾದ ಇತಿಹಾಸಕಾರ ರಾಮಚಂದ್ರ ಗುಹಾ ಅವರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದರು.
ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದು ಯಾವುದೇ ಪ್ರತಿಭಟನೆಗಳಿಗೂ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿ ಟೌನ್ಹಾಲ್ ಎದುರು ಪ್ರತಿಭಟನೆ ಅಥವಾ ಪ್ರದರ್ಶನ ನಡೆಸಿದ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.