ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವನಾಥ್‌ ನಾಮನಿರ್ದೇಶನಕ್ಕೆ ಎಚ್‌.ಎಂ.ರೇವಣ್ಣ ಒತ್ತಾಯ

Last Updated 5 ಜುಲೈ 2020, 20:04 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಸಚಿವ ಎಚ್‌.ವಿಶ್ವನಾಥ್‌ ಅವರನ್ನು ವಿಧಾನಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಶೆಫರ್ಡ್ಸ್‌ ಇಂಡಿಯಾ ಇಂಟರ್‌ ನ್ಯಾಷನಲ್‌ನ ರಾಷ್ಟ್ರೀಯ ಸಂಚಾಲಕ ಎಚ್‌.ಎಂ. ರೇವಣ್ಣ ಒತ್ತಾಯಿಸಿದ್ದಾರೆ.

ಸಂಘಟನೆಯ ಪ್ರಧಾನ ಕಾರ್ಯ ದರ್ಶಿ ಎಂ.ನಾಗರಾಜ್ ಜತೆಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರೇವಣ್ಣ ಅವರು ಈ ಸಂಬಂಧ ಮನವಿ ಸಲ್ಲಿಸಿದರು.

‘ವಿಶ್ವನಾಥ್‌ ಅವರು ಹಿಂದುಳಿದ ವರ್ಗಗಳ ಸಂಘಟನೆ, ಏಕತೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅಂತರರಾಷ್ಟ್ರೀಯ ಶೇಫರ್ಡ್ಸ್‌ ಫೆಡರೇಷನ್‌ನ ಸ್ಥಾಪನೆಗೆ ಮತ್ತು ಕುರುಬರ ಸಂಘಟನೆಗಾಗಿ ಹಗಲಿರುಳೂ ಶ್ರಮಿಸಿದ್ದಾರೆ. ಶಿಕ್ಷಣ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ’ ಎಂದು ರೇವಣ್ಣ ತಿಳಿಸಿದರು.

‘ಸಾಹಿತಿಯಾಗಿ ಮತ್ತು ವಾಗ್ಮಿಯಾಗಿ ಅವರು ಜನ ಮನ್ನಣೆಗೆ ಗಳಿಸಿದ್ದಾರೆ. ಹಳ್ಳಿ ಹಕ್ಕಿ ಹಾಡು, ಮತ ಸಂತೆ, ಆಪತ್‌ ಸ್ಥಿತಿಯ ಆಲಾಪಗಳು ಸೇರಿ ಹಲವು ಕೃತಿಗಳನ್ನೂ ರಚಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT