ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಬೆಂಗಳೂರಿನಲ್ಲಿ ಜನಸ್ನೇಹಿ ಮತ್ತು ಸುಗಮ ಪಾರ್ಕಿಂಗ್ ಪದ್ಧತಿ ಜಾರಿಗೊಳಿಸಲು ಸರ್ಕಾರ ಯೋಚಿಸಿದೆ. ಅದಕ್ಕೆ ಪೂರಕವಾಗಿ ಅಧಿಕಾರಿಗಳು ಹಾಗೂ ತಜ್ಞರ ಜತೆ ಚರ್ಚಿಸಲಾಗಿದೆ. ಅವರ ಸಲಹೆ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಅವರೊಂದಿಗೂ ಚರ್ಚಿ ಸಲಾಗಿದೆ. ಟೋಯಿಂಗ್ ಸಂಬಂ ಧಿಸಿದಂತೆ ಯಾವುದೇ ತೀರ್ಮಾನ ಅಂತಿಮವಾಗಿಲ್ಲ’ ಎಂದು ಹೇಳಿದ್ದಾರೆ.