‘ನಗರದ ಹಲವೆಡೆ ಹಗಲಿನಲ್ಲಿ ಆರೋಪಿಗಳು ಸಂಚರಿಸುತ್ತಿದ್ದರು. ಬೀಗ ಹಾಕಿರುತ್ತಿದ್ದ, ಅಂಗಣದಲ್ಲಿ ಕಸ ಬಿದ್ದಿರುತ್ತಿದ್ದ ಹಾಗೂ ರಂಗೋಲಿ ಹಾಕಿರದ ಮನೆಗಳನ್ನು ಗುರುತಿಸುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಳ್ಳುತ್ತಿದ್ದರು. ರಾತ್ರಿ ಮನೆಗಳ ಬೀಗ ಮುರಿದು ಒಳಗೆ ನುಗ್ಗುತ್ತಿದ್ದರು. ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದರು’ ಎಂದೂ ಹೇಳಿದರು.