<p><strong>ಬೆಂಗಳೂರು:</strong> ಆರ್.ಟಿ.ನಗರ ಠಾಣೆ ವ್ಯಾಪ್ತಿಯ ಕೆಲ ಮನೆಗಳಲ್ಲಿ ಕಳವು ಮಾಡಿದ್ದ ಆರೋಪದಡಿ ದಂಪತಿಯನ್ನು ಬಂಧಿಸಿರುವ ಪೊಲೀಸರು, ಅವರಿಂದ ₹ 8.5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.</p>.<p>‘ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ನಿವಾಸಿ ಜಯಂತಿ ಅಲಿಯಾಸ್ ಕುಟ್ಟಿಯಮ್ಮ (30) ಹಾಗೂ ಅವರ ಪತಿ ಬಾಬು ಅಲಿಯಾಸ್ ಮಾರ್ಕೆಟ್ ಬಾಬು (33) ಬಂಧಿತರು. 2019ರಿಂದಲೇ ದಂಪತಿ ಕಳ್ಳತನ ಎಸಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಆರ್.ಟಿ.ನಗರ ಠಾಣೆ ವ್ಯಾಪ್ತಿಯ 6 ಕಡೆ ಕಳ್ಳತನ ನಡೆದಿತ್ತು. ಈ ಬಗ್ಗೆ ತನಿಖೆ ಕೈಗೊಂಡಿದ್ದ ವಿಶೇಷ ತಂಡ, ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಪರಿಶೀಲಿಸಿತ್ತು. ಆದರೆ, ಯಾವುದೇ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ, ಕಳ್ಳತನ ಪ್ರಕರಣಗಳಲ್ಲಿ ಈ ಹಿಂದೆ ಬಂಧಿತರಾಗಿದ್ದ ಆರೋಪಿಗಳ ಬೆರಳಚ್ಚು ಪರಿಶೀಲನೆಗೆ ಮುಂದಾಗಿತ್ತು.’</p>.<p>‘ಮಲ್ಲೇಶ್ವರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ 2019ರಲ್ಲಿ ದಂಪತಿ ಕಳ್ಳತನ ಎಸಗಿದ್ದರು. ಈ ಪ್ರಕರಣದಲ್ಲಿ ದಂಪತಿಯನ್ನು ಬಂಧಿಸಿದ್ದ ಪೊಲೀಸರು, ಬೆರಳಚ್ಚು ಸಂಗ್ರಹಿಸಿಟ್ಟುಕೊಂಡಿದ್ದರು. ಆರ್.ಟಿ. ನಗರ ಪ್ರಕರಣಗಳಲ್ಲಿ ಸಂಗ್ರಹಿಸಿದ್ದ ಬೆರಳಚ್ಚು ಮಾದರಿಯನ್ನು ಹೋಲಿಕೆ ಮಾಡಲಾಯಿತು. ಅವಾಗಲೇ ಆರೋಪಿಗಳ ಸುಳಿವು ಲಭ್ಯವಾಯಿತು’ ಎಂದೂ ಪೊಲೀಸರು ತಿಳಿಸಿದರು.</p>.<p>‘ಡಿ.ಜೆ.ಹಳ್ಳಿ ಬಳಿಯ ಕಾವಲ್ಬೈರಸಂದ್ರ ಬಳಿ ಆರೋಪಿಗಳು ವಾಸವಿದ್ದರು. ಮನೆ ಮೇಲೆ ದಾಳಿ ಮಾಡಿ ದಂಪತಿಯನ್ನು ಸೆರೆ ಹಿಡಿಯಲಾಗಿದೆ’ ಎಂದೂ ಹೇಳಿದರು.</p>.<p class="Subhead">ಬಾಡಿಗೆ ಕೇಳುವ ನೆಪದಲ್ಲಿ ಸುತ್ತಾಟ: ‘ಆರೋಪಿ ಜಯಂತಿ, ಸ್ಥಳೀಯ ಸಂಘಟನೆಯೊಂದರ ಸದಸ್ಯೆ ಆಗಿದ್ದರು. ಮನೆ ಬಾಡಿಗೆ ಕೇಳುವ ನೆಪದಲ್ಲಿ ನಗರದಲ್ಲಿ ಸುತ್ತಾಡುತ್ತಿದ್ದ ಆಕೆ, ಬೀಗ ಹಾಕಿರುತ್ತಿದ್ದ ಮನೆಗಳನ್ನು ಗುರುತಿಸುತ್ತಿದ್ದಳು. ಅದೇ ಮಾಹಿತಿಯನ್ನು ಪತಿ ಬಾಬುಗೆ ತಿಳಿಸುತ್ತಿದ್ದಳು’ ಎಂದು ಪೊಲೀಸರು ವಿವರಿಸಿದರು.</p>.<p>‘ಹಗಲು ಹಾಗೂ ರಾತ್ರಿ ವೇಳೆ ಮನೆಯ ಬೀಗ ಮುರಿದು ಒಳಗೆ ನುಗ್ಗುತ್ತಿದ್ದ ಬಾಬು, ಚಿನ್ನಾಭರಣ ಹಾಗೂ ನಗದು ಕದ್ದು ಬರುತ್ತಿದ್ದ. ಜಯಂತಿ ಹೊರಗೆ ಕಾಯುತ್ತಿದ್ದರು. ಯಾರಾದರೂ ಬಂದರೆ ಸೂಚನೆ ನೀಡುತ್ತಿದ್ದಳು. ಈ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದೂ ಮಾಹಿತಿ ನೀಡಿದರು.</p>.<p>‘2021ರ ಮಾರ್ಚ್ನಲ್ಲಿ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದಿದ್ದ ಆರೋಪಿಗಳು, 15 ದಿನ ಜೈಲಿನಲ್ಲಿ ಇದ್ದರು. ಜಾಮೀನು ಮೇಲೆ ಹೊರಬಂದು ಪುನಃ ಕಳ್ಳತನಕ್ಕೆ ಇಳಿದಿದ್ದರು. ಆರ್.ಟಿ.ನಗರದ ಮಂಜುನಾಥ ಬಡಾವಣೆಯಲ್ಲಿರುವ ಮನೆಯೊಂದರಲ್ಲಿ ಸೆ. 16ರಂದು ಕಳ್ಳತನ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು’ ಎಂದೂ ಹೇಳಿದರು.</p>.<p>‘ರಾಮಮೂರ್ತಿನಗರ, ಯಶವಂತಪುರ, ಅಶೋಕನಗರ, ಡಿ.ಜೆ.ಹಳ್ಳಿ, ಅನ್ನಪೂರ್ಣೇಶ್ವರಿನಗರ, ವಿವೇಕನಗರ, ಬೆಳ್ಳಂದೂರು, ವಿಧಾನಸೌಧ, ಕೊತ್ತನೂರು, ಮಡಿವಾಳ ಹಾಗೂ ಕೆ.ಆರ್.ಪುರ ಠಾಣೆಗಳ ವ್ಯಾಪ್ತಿಯಲ್ಲೂ ದಂಪತಿ ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆರ್.ಟಿ.ನಗರ ಠಾಣೆ ವ್ಯಾಪ್ತಿಯ ಕೆಲ ಮನೆಗಳಲ್ಲಿ ಕಳವು ಮಾಡಿದ್ದ ಆರೋಪದಡಿ ದಂಪತಿಯನ್ನು ಬಂಧಿಸಿರುವ ಪೊಲೀಸರು, ಅವರಿಂದ ₹ 8.5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.</p>.<p>‘ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ನಿವಾಸಿ ಜಯಂತಿ ಅಲಿಯಾಸ್ ಕುಟ್ಟಿಯಮ್ಮ (30) ಹಾಗೂ ಅವರ ಪತಿ ಬಾಬು ಅಲಿಯಾಸ್ ಮಾರ್ಕೆಟ್ ಬಾಬು (33) ಬಂಧಿತರು. 2019ರಿಂದಲೇ ದಂಪತಿ ಕಳ್ಳತನ ಎಸಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಆರ್.ಟಿ.ನಗರ ಠಾಣೆ ವ್ಯಾಪ್ತಿಯ 6 ಕಡೆ ಕಳ್ಳತನ ನಡೆದಿತ್ತು. ಈ ಬಗ್ಗೆ ತನಿಖೆ ಕೈಗೊಂಡಿದ್ದ ವಿಶೇಷ ತಂಡ, ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಪರಿಶೀಲಿಸಿತ್ತು. ಆದರೆ, ಯಾವುದೇ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ, ಕಳ್ಳತನ ಪ್ರಕರಣಗಳಲ್ಲಿ ಈ ಹಿಂದೆ ಬಂಧಿತರಾಗಿದ್ದ ಆರೋಪಿಗಳ ಬೆರಳಚ್ಚು ಪರಿಶೀಲನೆಗೆ ಮುಂದಾಗಿತ್ತು.’</p>.<p>‘ಮಲ್ಲೇಶ್ವರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ 2019ರಲ್ಲಿ ದಂಪತಿ ಕಳ್ಳತನ ಎಸಗಿದ್ದರು. ಈ ಪ್ರಕರಣದಲ್ಲಿ ದಂಪತಿಯನ್ನು ಬಂಧಿಸಿದ್ದ ಪೊಲೀಸರು, ಬೆರಳಚ್ಚು ಸಂಗ್ರಹಿಸಿಟ್ಟುಕೊಂಡಿದ್ದರು. ಆರ್.ಟಿ. ನಗರ ಪ್ರಕರಣಗಳಲ್ಲಿ ಸಂಗ್ರಹಿಸಿದ್ದ ಬೆರಳಚ್ಚು ಮಾದರಿಯನ್ನು ಹೋಲಿಕೆ ಮಾಡಲಾಯಿತು. ಅವಾಗಲೇ ಆರೋಪಿಗಳ ಸುಳಿವು ಲಭ್ಯವಾಯಿತು’ ಎಂದೂ ಪೊಲೀಸರು ತಿಳಿಸಿದರು.</p>.<p>‘ಡಿ.ಜೆ.ಹಳ್ಳಿ ಬಳಿಯ ಕಾವಲ್ಬೈರಸಂದ್ರ ಬಳಿ ಆರೋಪಿಗಳು ವಾಸವಿದ್ದರು. ಮನೆ ಮೇಲೆ ದಾಳಿ ಮಾಡಿ ದಂಪತಿಯನ್ನು ಸೆರೆ ಹಿಡಿಯಲಾಗಿದೆ’ ಎಂದೂ ಹೇಳಿದರು.</p>.<p class="Subhead">ಬಾಡಿಗೆ ಕೇಳುವ ನೆಪದಲ್ಲಿ ಸುತ್ತಾಟ: ‘ಆರೋಪಿ ಜಯಂತಿ, ಸ್ಥಳೀಯ ಸಂಘಟನೆಯೊಂದರ ಸದಸ್ಯೆ ಆಗಿದ್ದರು. ಮನೆ ಬಾಡಿಗೆ ಕೇಳುವ ನೆಪದಲ್ಲಿ ನಗರದಲ್ಲಿ ಸುತ್ತಾಡುತ್ತಿದ್ದ ಆಕೆ, ಬೀಗ ಹಾಕಿರುತ್ತಿದ್ದ ಮನೆಗಳನ್ನು ಗುರುತಿಸುತ್ತಿದ್ದಳು. ಅದೇ ಮಾಹಿತಿಯನ್ನು ಪತಿ ಬಾಬುಗೆ ತಿಳಿಸುತ್ತಿದ್ದಳು’ ಎಂದು ಪೊಲೀಸರು ವಿವರಿಸಿದರು.</p>.<p>‘ಹಗಲು ಹಾಗೂ ರಾತ್ರಿ ವೇಳೆ ಮನೆಯ ಬೀಗ ಮುರಿದು ಒಳಗೆ ನುಗ್ಗುತ್ತಿದ್ದ ಬಾಬು, ಚಿನ್ನಾಭರಣ ಹಾಗೂ ನಗದು ಕದ್ದು ಬರುತ್ತಿದ್ದ. ಜಯಂತಿ ಹೊರಗೆ ಕಾಯುತ್ತಿದ್ದರು. ಯಾರಾದರೂ ಬಂದರೆ ಸೂಚನೆ ನೀಡುತ್ತಿದ್ದಳು. ಈ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದೂ ಮಾಹಿತಿ ನೀಡಿದರು.</p>.<p>‘2021ರ ಮಾರ್ಚ್ನಲ್ಲಿ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದಿದ್ದ ಆರೋಪಿಗಳು, 15 ದಿನ ಜೈಲಿನಲ್ಲಿ ಇದ್ದರು. ಜಾಮೀನು ಮೇಲೆ ಹೊರಬಂದು ಪುನಃ ಕಳ್ಳತನಕ್ಕೆ ಇಳಿದಿದ್ದರು. ಆರ್.ಟಿ.ನಗರದ ಮಂಜುನಾಥ ಬಡಾವಣೆಯಲ್ಲಿರುವ ಮನೆಯೊಂದರಲ್ಲಿ ಸೆ. 16ರಂದು ಕಳ್ಳತನ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು’ ಎಂದೂ ಹೇಳಿದರು.</p>.<p>‘ರಾಮಮೂರ್ತಿನಗರ, ಯಶವಂತಪುರ, ಅಶೋಕನಗರ, ಡಿ.ಜೆ.ಹಳ್ಳಿ, ಅನ್ನಪೂರ್ಣೇಶ್ವರಿನಗರ, ವಿವೇಕನಗರ, ಬೆಳ್ಳಂದೂರು, ವಿಧಾನಸೌಧ, ಕೊತ್ತನೂರು, ಮಡಿವಾಳ ಹಾಗೂ ಕೆ.ಆರ್.ಪುರ ಠಾಣೆಗಳ ವ್ಯಾಪ್ತಿಯಲ್ಲೂ ದಂಪತಿ ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>