ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ರವಿಕುಮಾರ್, ‘ಕಳೆದೊಂದು ದಶಕದಿಂದ ಬಡಜನರು ಸ್ವಂತ ಸೂರಿಲ್ಲದೆ ಬಾಡಿಗೆ ಮನೆಗಳಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಆದರೆ, ನೂರಾರು ಎಕರೆ ಸರ್ಕಾರಿ ಜಾಗಗಳನ್ನು ಅಕ್ರಮ
ವಾಗಿ ಕಬಳಿಸಿರುವ ಭೂಗಳ್ಳರು, ಹಸಿರು ವಲಯಗಳಲ್ಲಿ ಅನಧಿಕೃತ ಬಡಾವಣೆಗಳನ್ನು ನಿರ್ಮಿಸಿ ಕೋಟ್ಯಂತರ ಹಣ ಲಪಟಾಯಿಸಿದ್ದು, ಇದರಲ್ಲಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಶಾಮೀಲಾಗಿದ್ದಾರೆ’ ಎಂದು ಅವರು ದೂರಿದರು.