<p><strong>ಯಲಹಂಕ: </strong>ಜೇನುತುಪ್ಪದಲ್ಲಿ ಕಲಬೆರಕೆ ತಡೆಗಟ್ಟುವುದರ ಜೊತೆಗೆ ಗುಣಮಟ್ಟ ಕಾಯ್ದುಕೊಂಡು ನಿರ್ದಿಷ್ಟ ಬ್ರ್ಯಾಂಡ್ ಸೃಷ್ಟಿಸಿಕೊಂಡರೆ ಹೊರರಾಜ್ಯ ಮತ್ತು ರಾಷ್ಟ್ರಗಳಿಗೆ ರಫ್ತು ಮಾಡಲು ವಿಫುಲ ಅವಕಾಶಗಳಿವೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ಹೇಳಿದರು.</p>.<p>ಅಖಿಲಭಾರತ ಸುಸಂಘಟಿತ ಜೇನುನೊಣ ಮತ್ತು ಪರಾಗಸ್ಪರ್ಶಗಳ ಸಂಶೋಧನಾ ಪ್ರಾಯೋಜನೆ ಹಾಗೂ ಜೇನುಕೃಷಿ ವಿಭಾಗದ ಆಶ್ರಯದಲ್ಲಿ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಜೇನುಸಾಕಾಣಿಕೆ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಜೇನುತುಪ್ಪದಲ್ಲಿ ಕಲಬೆರಕೆ ಪದಾರ್ಥಗಳನ್ನು ಪತ್ತೆಹಚ್ಚಿ, ಗುಣಮಟ್ಟವನ್ನು ದೃಢಪಡಿಸುವ ನಿಟ್ಟಿನಲ್ಲಿ ಉತ್ಕೃಷ್ಟಜೇನು ಪ್ರಯೋಗಾಲಯ ಸ್ಥಾಪಿಸುವ ಸಂಬಂಧ ಅನುದಾನ ಬಿಡುಗಡೆಗಾಗಿ ಕೇಂದ್ರ ಮತ್ತು ರಾಜ್ಯಸರ್ಕಾರಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.</p>.<p>ಕೃಷಿ ವಿಶ್ವವಿದ್ಯಾಲಯದ ಹಿರಿಯ ವಿಜ್ಞಾನಿ ಡಾ.ಎಸ್.ನಿರಂಜನಮೂರ್ತಿ, ‘ಸಮಗ್ರ ಕೃಷಿಪದ್ಧತಿಯಲ್ಲಿ ಜೇನುಕೃಷಿಯನ್ನು ಉಪಕಸುಬನ್ನಾಗಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯಯುತ ಜೇನು ದೊರೆಯುವುದರ ಜೊತೆಗೆ ಬೆಳೆಗಳ ಇಳುವರಿಯೂ ಹೆಚ್ಚಾಗಲಿದೆ’ ಎಂದರು.</p>.<p>ಮದಕರಿ ಸೌಹಾರ್ದ ಸಹಕಾರಿ ಅಧ್ಯಕ್ಷ ಡಿ.ಎ.ನಾಗರಾಜು, ಜೇನುಕೃಷಿ ವಿಭಾಗದ ಮುಖ್ಯಸ್ಥರಾದ ಡಾ.ಕೆ.ಎಸ್.ಜಗದೀಶ್, ಡಾ.ಕೆ.ಟಿ. ವಿಜಯಕುಮಾರ್, ಸಂಪನ್ಮೂಲ ವ್ಯಕ್ತಿ ಜಿ.ಈಶ್ವರಪ್ಪ, ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಎಸ್.ಭಟ್, ಡಾ.ಜೆ.ಸಿ.ಕುಬೇರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>ಜೇನುತುಪ್ಪದಲ್ಲಿ ಕಲಬೆರಕೆ ತಡೆಗಟ್ಟುವುದರ ಜೊತೆಗೆ ಗುಣಮಟ್ಟ ಕಾಯ್ದುಕೊಂಡು ನಿರ್ದಿಷ್ಟ ಬ್ರ್ಯಾಂಡ್ ಸೃಷ್ಟಿಸಿಕೊಂಡರೆ ಹೊರರಾಜ್ಯ ಮತ್ತು ರಾಷ್ಟ್ರಗಳಿಗೆ ರಫ್ತು ಮಾಡಲು ವಿಫುಲ ಅವಕಾಶಗಳಿವೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ಹೇಳಿದರು.</p>.<p>ಅಖಿಲಭಾರತ ಸುಸಂಘಟಿತ ಜೇನುನೊಣ ಮತ್ತು ಪರಾಗಸ್ಪರ್ಶಗಳ ಸಂಶೋಧನಾ ಪ್ರಾಯೋಜನೆ ಹಾಗೂ ಜೇನುಕೃಷಿ ವಿಭಾಗದ ಆಶ್ರಯದಲ್ಲಿ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಜೇನುಸಾಕಾಣಿಕೆ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಜೇನುತುಪ್ಪದಲ್ಲಿ ಕಲಬೆರಕೆ ಪದಾರ್ಥಗಳನ್ನು ಪತ್ತೆಹಚ್ಚಿ, ಗುಣಮಟ್ಟವನ್ನು ದೃಢಪಡಿಸುವ ನಿಟ್ಟಿನಲ್ಲಿ ಉತ್ಕೃಷ್ಟಜೇನು ಪ್ರಯೋಗಾಲಯ ಸ್ಥಾಪಿಸುವ ಸಂಬಂಧ ಅನುದಾನ ಬಿಡುಗಡೆಗಾಗಿ ಕೇಂದ್ರ ಮತ್ತು ರಾಜ್ಯಸರ್ಕಾರಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.</p>.<p>ಕೃಷಿ ವಿಶ್ವವಿದ್ಯಾಲಯದ ಹಿರಿಯ ವಿಜ್ಞಾನಿ ಡಾ.ಎಸ್.ನಿರಂಜನಮೂರ್ತಿ, ‘ಸಮಗ್ರ ಕೃಷಿಪದ್ಧತಿಯಲ್ಲಿ ಜೇನುಕೃಷಿಯನ್ನು ಉಪಕಸುಬನ್ನಾಗಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯಯುತ ಜೇನು ದೊರೆಯುವುದರ ಜೊತೆಗೆ ಬೆಳೆಗಳ ಇಳುವರಿಯೂ ಹೆಚ್ಚಾಗಲಿದೆ’ ಎಂದರು.</p>.<p>ಮದಕರಿ ಸೌಹಾರ್ದ ಸಹಕಾರಿ ಅಧ್ಯಕ್ಷ ಡಿ.ಎ.ನಾಗರಾಜು, ಜೇನುಕೃಷಿ ವಿಭಾಗದ ಮುಖ್ಯಸ್ಥರಾದ ಡಾ.ಕೆ.ಎಸ್.ಜಗದೀಶ್, ಡಾ.ಕೆ.ಟಿ. ವಿಜಯಕುಮಾರ್, ಸಂಪನ್ಮೂಲ ವ್ಯಕ್ತಿ ಜಿ.ಈಶ್ವರಪ್ಪ, ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಎಸ್.ಭಟ್, ಡಾ.ಜೆ.ಸಿ.ಕುಬೇರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>