‘ರಾಜಕೀಯ ನಾಯಕರಿಗೆ ಗಾಳ ಹಾಕಿ ಹನಿಟ್ರ್ಯಾಪ್ ನಡೆಸಿ ವಂಚಿಸುತ್ತಿದ್ದಳು. ಅಲ್ಲಿನ ಪುರಸಭೆಯ ಎಂಜಿನಿಯರ್ಗೆ ಹನಿಟ್ರ್ಯಾಪ್ಗೆ ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದಳು. 2019ರಲ್ಲಿ ಈಕೆಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನು ಮೇಲೆ ಹೊರಬಂದಿದ್ದಳು. ಪೊಲೀಸರು ಹುಡುಕಾಟ ಆರಂಭಿಸಿದ ಮೇಲೆ ಕರ್ನಾಟಕಕ್ಕೆ ಪರಾರಿಯಾಗಿದ್ದಳು. ಚೆನ್ನೈಗೂ ತೆರಳಿ ಅಲ್ಲಿನ ಸ್ಪಾಗಳಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲೂ ಶ್ರೀಮಂತ ಹುಡುಗಿಯರ ಸ್ನೇಹ ಸಂಪಾದಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದಳು’ ಎಂದು ಪೊಲೀಸರು ಹೇಳಿದರು.