ಬೆಂಗಳೂರು:ಕೊರೊನಾ ಸೇನಾನಿಗಳಿಗೆ ಪುಷ್ಪಾಲಂಕಾರದ ಮೂಲಕ ವಿಶಿಷ್ಟವಾಗಿ ಗೌರವ ಸಮರ್ಪಣೆ ಕಾರ್ಯಕ್ರಮ ಗುರುವಾರ ವಿಧಾಸಸೌಧದ ಮುಂಭಾಗ ನಡೆಯಿತು.
ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಪ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ ಕಾರ್ಯಕ್ರಮವನ್ನು ತೋಟಗಾರಿಕಾ ಸಚಿವ ನಾರಾಯಣ ಗೌಡ ಉದ್ಘಾಟಿಸಿದರು.
1 ಲಕ್ಷದ 72 ಸಾವಿರ ಹೂಗಳನ್ನು ಬಳಸಿ ಅಲಂಕಾರ ಮಾಡಲಾಗಿದೆ. ಬೆಂಗಳೂರಿನ ವಿವಿಧೆಡೆ ಇಂದಿನಿಂದ ಮೂರು ದಿನಗಳ ಕಾಲ ಪುಷ್ಪಾಲಂಕರದ ಮೂಲಕ ಗೌರವ ಸಮರ್ಪಣೆ ಮಾಡಲಾಗುವುದು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ತೋಟಗಾರಿಕೆ ಇಲಾಖೆ ನಿರ್ದೇಶಕ ವೆಂಕಟೇಶ್ ಮತ್ತಿತರರು ಪಾಲ್ಗೊಂಡಿದ್ದರು.