<p><strong>ಬೆಂಗಳೂರು</strong>: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಇದೇ 7ರಂದು ಬೆಳಿಗ್ಗೆ 11.30 ಕ್ಕೆ 12 ಮತ್ತು 13ನೇ ಘಟಿಕೋತ್ಸವವನ್ನು ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸೇರಿ ಆರು ವಿದ್ವಾಂಸರಿಗೆ ಗೌರವ ಡಿ.ಲಿಟ್ ಪ್ರದಾನ ಮಾಡಲಾಗುತ್ತದೆ. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಡಾ.ಎಸ್. ಅಹಲ್ಯ, ‘ಮಹಾಬೋಧಿ ಸೊಸೈಟಿಯ ಬೌದ್ಧ ಭಿಕ್ಕು ಆನಂದ ಥೇರೊ, ವಿದ್ವಾಂಸರಾದ ಪುಷ್ಪಾ ದೀಕ್ಷಿತ್, ವ್ಯಾಸನಕೆರೆ ಪ್ರಭಂಜನಾಚಾರ್ಯ, ಶಿಂಗಪ್ಪ ಎಚ್.ಎಂ. ಹಾಗೂ ಸುಕಾಂತ್ ಕುಮಾರ್ ಸೇನಾಪತಿ ಅವರಿಗೆ ಘಟಿಕೋತ್ಸವದಲ್ಲಿ ಡಿ.ಲಿಟ್ ಪದವಿ ನೀಡಿ ಗೌರವಿಸಲಾಗುತ್ತದೆ. 2023–24 ಮತ್ತು 2024–25ನೇ ಸಾಲಿನ ಒಟ್ಟು 917 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ’ ಎಂದು ಹೇಳಿದರು.</p>.<p>‘ತಲಾ 21 ವಿದ್ಯಾರ್ಥಿಗಳು ನಗದು ಬಹುಮಾನ ಪಡೆದರೆ, ಕ್ರಮವಾಗಿ 26 ಹಾಗೂ 27 ವಿದ್ಯಾರ್ಥಿಗಳು ಚಿನ್ನದ ಪದಕ ಸ್ವೀಕರಿಸಲಿದ್ದಾರೆ. 36 ಅಭ್ಯರ್ಥಿಗಳು ಪಿಎಚ್.ಡಿ ಪದವಿ ಪಡೆಯಲಿದ್ದಾರೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಇದೇ 7ರಂದು ಬೆಳಿಗ್ಗೆ 11.30 ಕ್ಕೆ 12 ಮತ್ತು 13ನೇ ಘಟಿಕೋತ್ಸವವನ್ನು ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸೇರಿ ಆರು ವಿದ್ವಾಂಸರಿಗೆ ಗೌರವ ಡಿ.ಲಿಟ್ ಪ್ರದಾನ ಮಾಡಲಾಗುತ್ತದೆ. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಡಾ.ಎಸ್. ಅಹಲ್ಯ, ‘ಮಹಾಬೋಧಿ ಸೊಸೈಟಿಯ ಬೌದ್ಧ ಭಿಕ್ಕು ಆನಂದ ಥೇರೊ, ವಿದ್ವಾಂಸರಾದ ಪುಷ್ಪಾ ದೀಕ್ಷಿತ್, ವ್ಯಾಸನಕೆರೆ ಪ್ರಭಂಜನಾಚಾರ್ಯ, ಶಿಂಗಪ್ಪ ಎಚ್.ಎಂ. ಹಾಗೂ ಸುಕಾಂತ್ ಕುಮಾರ್ ಸೇನಾಪತಿ ಅವರಿಗೆ ಘಟಿಕೋತ್ಸವದಲ್ಲಿ ಡಿ.ಲಿಟ್ ಪದವಿ ನೀಡಿ ಗೌರವಿಸಲಾಗುತ್ತದೆ. 2023–24 ಮತ್ತು 2024–25ನೇ ಸಾಲಿನ ಒಟ್ಟು 917 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ’ ಎಂದು ಹೇಳಿದರು.</p>.<p>‘ತಲಾ 21 ವಿದ್ಯಾರ್ಥಿಗಳು ನಗದು ಬಹುಮಾನ ಪಡೆದರೆ, ಕ್ರಮವಾಗಿ 26 ಹಾಗೂ 27 ವಿದ್ಯಾರ್ಥಿಗಳು ಚಿನ್ನದ ಪದಕ ಸ್ವೀಕರಿಸಲಿದ್ದಾರೆ. 36 ಅಭ್ಯರ್ಥಿಗಳು ಪಿಎಚ್.ಡಿ ಪದವಿ ಪಡೆಯಲಿದ್ದಾರೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>