<p>ಕೆ.ಆರ್.ಪುರ: ಹೂಡಿ ಗ್ರಾಮದಲ್ಲಿ ಶ್ರೀಲಕ್ಷ್ಮಿನಾರಾಯಣ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆ, ಭಕ್ತಿಭಾವದಿಂದ ನೆರವೇರಿತು.</p>.<p>ಬ್ರಹ್ಮ ರಥೋತ್ಸವದ ಅಂಗವಾಗಿ ಗುರುವಾರ ಸಂಜೆಯಿಂದ ದೇವಾಲಯದಲ್ಲಿ ವಿಶೇಷ ಪೂಜೆಗಳು, ಹೋಮ-ಹವನಗಳು ನಡೆದವು. ಉತ್ಸವ ಮೂರ್ತಿಗೆ ವಿವಿಧ ಬಗೆಯ ಹೂವಿನ ಅಲಂಕಾರ ಮಾಡಲಾಗಿತ್ತು,</p>.<p>ಭಕ್ತರ ಜಯಘೋಷಗಳ ಮಧ್ಯೆ ದೇವರನ್ನು ಅಲಂಕೃತ ರಥದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ರಥದ ಮುಂದೆ ಸಿಂಗಾರಗೊಂಡ ಎತ್ತುಗಳ ಬಂಡಿ, ಗಾರುಡಿ ಗೊಂಬೆ ನೃತ್ಯ, ಡೊಳ್ಳು ಕುಣಿತ, ತಮಟೆ ವಿವಿಧ ಕಲಾ ತಂಡಗಳ ನೃತ್ಯ ಪ್ರದರ್ಶನಗಳು ಸೂರೆಗೊಂಡವು.</p>.<p>ಹೂಡಿ, ತಿಗಳರಪಾಳ್ಯ, ರಾಜಪಾಳ್ಯ, ಅಯ್ಯಪ್ಪನಗರ, ಕಾವೇರಿ ನಗರ, ಗರುಡಾಚಾರ್ ಪಾಳ್ಯ, ಮಹದೇವಪುರ ಸುತ್ತಮುತ್ತಲಿನ ಊರುಗಳಿಂದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ ಭಕ್ತಿ ಸಮರ್ಪಿಸಿದರು.</p>.<p>ವಿಶೇಷವಾಗಿ ಮಹಿಳೆಯರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉತ್ಸವಕ್ಕೆ ಮತ್ತಷ್ಟು ಚೈತನ್ಯ ತುಂಬಿದರು. ಭಕ್ತರಿಗಾಗಿ ಅನ್ನದಾಸೋಹ, ಪಾನಕ ಹಾಗೂ ಮಜ್ಜಿಗೆ ವಿತರಣೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಮಹದೇವಪುರ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಹೂಡಿ ಎಚ್.ಎಸ್.ಪಿಳ್ಳಪ್ಪ, ಎಚ್.ಡಿ ಶ್ರೀನಿವಾಸ್ ರೆಡ್ಡಿ ಎಚ್.ವಿ.ಮಂಜುನಾಥ್, ಎಚ್.ಬಿ.ಅನೂಪ್ ಕುಮಾರ್, ವಿಶ್ವನಾಥ್, ಎಚ್.ಎನ್.ಮೋಹನ್, ಎಚ್.ಎಸ್. ನರೇಂದ್ರಬಾಬು, ಎಚ್.ಜೆ ಮಹೇಂದ್ರ ಬಾಬು, ಎಲ್.ಟಿ.ಶ್ರೀನಿವಾಸ್, ಎಚ್.ಎಸ್.ಪವನ್ ರೆಡ್ಡಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-4-722366528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪುರ: ಹೂಡಿ ಗ್ರಾಮದಲ್ಲಿ ಶ್ರೀಲಕ್ಷ್ಮಿನಾರಾಯಣ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆ, ಭಕ್ತಿಭಾವದಿಂದ ನೆರವೇರಿತು.</p>.<p>ಬ್ರಹ್ಮ ರಥೋತ್ಸವದ ಅಂಗವಾಗಿ ಗುರುವಾರ ಸಂಜೆಯಿಂದ ದೇವಾಲಯದಲ್ಲಿ ವಿಶೇಷ ಪೂಜೆಗಳು, ಹೋಮ-ಹವನಗಳು ನಡೆದವು. ಉತ್ಸವ ಮೂರ್ತಿಗೆ ವಿವಿಧ ಬಗೆಯ ಹೂವಿನ ಅಲಂಕಾರ ಮಾಡಲಾಗಿತ್ತು,</p>.<p>ಭಕ್ತರ ಜಯಘೋಷಗಳ ಮಧ್ಯೆ ದೇವರನ್ನು ಅಲಂಕೃತ ರಥದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ರಥದ ಮುಂದೆ ಸಿಂಗಾರಗೊಂಡ ಎತ್ತುಗಳ ಬಂಡಿ, ಗಾರುಡಿ ಗೊಂಬೆ ನೃತ್ಯ, ಡೊಳ್ಳು ಕುಣಿತ, ತಮಟೆ ವಿವಿಧ ಕಲಾ ತಂಡಗಳ ನೃತ್ಯ ಪ್ರದರ್ಶನಗಳು ಸೂರೆಗೊಂಡವು.</p>.<p>ಹೂಡಿ, ತಿಗಳರಪಾಳ್ಯ, ರಾಜಪಾಳ್ಯ, ಅಯ್ಯಪ್ಪನಗರ, ಕಾವೇರಿ ನಗರ, ಗರುಡಾಚಾರ್ ಪಾಳ್ಯ, ಮಹದೇವಪುರ ಸುತ್ತಮುತ್ತಲಿನ ಊರುಗಳಿಂದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ ಭಕ್ತಿ ಸಮರ್ಪಿಸಿದರು.</p>.<p>ವಿಶೇಷವಾಗಿ ಮಹಿಳೆಯರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉತ್ಸವಕ್ಕೆ ಮತ್ತಷ್ಟು ಚೈತನ್ಯ ತುಂಬಿದರು. ಭಕ್ತರಿಗಾಗಿ ಅನ್ನದಾಸೋಹ, ಪಾನಕ ಹಾಗೂ ಮಜ್ಜಿಗೆ ವಿತರಣೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಮಹದೇವಪುರ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಹೂಡಿ ಎಚ್.ಎಸ್.ಪಿಳ್ಳಪ್ಪ, ಎಚ್.ಡಿ ಶ್ರೀನಿವಾಸ್ ರೆಡ್ಡಿ ಎಚ್.ವಿ.ಮಂಜುನಾಥ್, ಎಚ್.ಬಿ.ಅನೂಪ್ ಕುಮಾರ್, ವಿಶ್ವನಾಥ್, ಎಚ್.ಎನ್.ಮೋಹನ್, ಎಚ್.ಎಸ್. ನರೇಂದ್ರಬಾಬು, ಎಚ್.ಜೆ ಮಹೇಂದ್ರ ಬಾಬು, ಎಲ್.ಟಿ.ಶ್ರೀನಿವಾಸ್, ಎಚ್.ಎಸ್.ಪವನ್ ರೆಡ್ಡಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-4-722366528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>