<p><strong>ಯಲಹಂಕ:</strong> ಬ್ಯಾಟರಾಯನಪುರ ಕ್ಷೇತ್ರದ ವ್ಯಾಪ್ತಿಯ ಬಂಡಿಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಐಟಿಸಿ ಸಂಸ್ಥೆಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಹೂವಿನಾಯಕನಹಳ್ಳಿ ಗ್ರಾಮದ ಕೆರೆಯನ್ನು ಸಂಸದ ಡಿ.ವಿ.ಸದಾನಂದಗೌಡ ಅವರು ಲೋಕಾರ್ಪಣೆಗೊಳಿಸಿದರು.</p>.<p>‘ಅಲ್ಪಾವಧಿಯಲ್ಲಿ ಹೆಚ್ಚಿನ ತೆರಿಗೆ ಸಂಗ್ರಹಿಸುವ ಮೂಲಕ ಮೂಲಸೌಕರ್ಯ ಅನುಷ್ಠಾನಗೊಳಿಸುವ ಕಾರ್ಯದಲ್ಲಿ ಈ ಪಂಚಾಯಿತಿಯು ಮುಂಚೂಣಿಯಲ್ಲಿದೆ. ಜನರ ಜೀವನಾಡಿಯಾಗಿರುವ ಕೆರೆಯನ್ನು ಅಭಿವೃದ್ಧಿಗೊಳಿಸಿರುವುದು ಶ್ಲಾಘನೀಯ. ಕೆರೆಯಲ್ಲಿ ನೀರಿನ ಸಂಗ್ರಹ ಹೆಚ್ಚುವುದರಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಇದರಿಂದ ಜನರು, ಜಾನುವಾರುಗಳು ಹಾಗೂ ಕೃಷಿಗೆ ಉಪಯೋಗವಾಗಲಿದೆ’ ಎಂದು ಸದಾನಂದ ಗೌಡ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಜಗದೀಶ್, ‘ಐಟಿಸಿ ಸಂಸ್ಥೆಯ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮದಡಿಯಲ್ಲಿ ₹ 40 ಲಕ್ಷ ದೇಣಿಗೆ ನೀಡುವ ಮೂಲಕ ಕೆರೆಯನ್ನು ಅಭಿವೃದ್ಧಿಪಡಿಸಲು ಕೈಜೋಡಿಸಿದೆ. ಹಲವು ವರ್ಷಗಳಿಂದ ನಿರುಪಯುಕ್ತವಾಗಿದ್ದ ಕೆರೆಯ ಹೂಳು ತೆಗೆಯಿಸಿ, ಸುತ್ತಲೂ ಏರಿ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಇದೇ ಮಾದರಿಯಲ್ಲಿ ಪಂಚಾಯಿತಿ ವ್ಯಾಪ್ತಿಯ ಇತರೆ ಕೆರೆಗಳನ್ನು ಅಭಿವೃದ್ಧಿಪಡಿಸಲಿದ್ದೇವೆ’ ಎಂದರು.</p>.<p>ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಅಂತರರಾಷ್ಟ್ರೀಯ ವಿಮಾನನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಗಿರೀಶ್, ಎನ್.ಮುನೇಗೌಡ, ಬಿಜೆಪಿ ಮುಖಂಡರಾದ ದೊಡ್ಡಬಸವರಾಜು, ಡಿ.ಜಗನ್ನಾಥ್, ಟಿ.ಪಿ.ಪ್ರಕಾಶ್, ದೀಪು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಬ್ಯಾಟರಾಯನಪುರ ಕ್ಷೇತ್ರದ ವ್ಯಾಪ್ತಿಯ ಬಂಡಿಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಐಟಿಸಿ ಸಂಸ್ಥೆಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಹೂವಿನಾಯಕನಹಳ್ಳಿ ಗ್ರಾಮದ ಕೆರೆಯನ್ನು ಸಂಸದ ಡಿ.ವಿ.ಸದಾನಂದಗೌಡ ಅವರು ಲೋಕಾರ್ಪಣೆಗೊಳಿಸಿದರು.</p>.<p>‘ಅಲ್ಪಾವಧಿಯಲ್ಲಿ ಹೆಚ್ಚಿನ ತೆರಿಗೆ ಸಂಗ್ರಹಿಸುವ ಮೂಲಕ ಮೂಲಸೌಕರ್ಯ ಅನುಷ್ಠಾನಗೊಳಿಸುವ ಕಾರ್ಯದಲ್ಲಿ ಈ ಪಂಚಾಯಿತಿಯು ಮುಂಚೂಣಿಯಲ್ಲಿದೆ. ಜನರ ಜೀವನಾಡಿಯಾಗಿರುವ ಕೆರೆಯನ್ನು ಅಭಿವೃದ್ಧಿಗೊಳಿಸಿರುವುದು ಶ್ಲಾಘನೀಯ. ಕೆರೆಯಲ್ಲಿ ನೀರಿನ ಸಂಗ್ರಹ ಹೆಚ್ಚುವುದರಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಇದರಿಂದ ಜನರು, ಜಾನುವಾರುಗಳು ಹಾಗೂ ಕೃಷಿಗೆ ಉಪಯೋಗವಾಗಲಿದೆ’ ಎಂದು ಸದಾನಂದ ಗೌಡ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಜಗದೀಶ್, ‘ಐಟಿಸಿ ಸಂಸ್ಥೆಯ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮದಡಿಯಲ್ಲಿ ₹ 40 ಲಕ್ಷ ದೇಣಿಗೆ ನೀಡುವ ಮೂಲಕ ಕೆರೆಯನ್ನು ಅಭಿವೃದ್ಧಿಪಡಿಸಲು ಕೈಜೋಡಿಸಿದೆ. ಹಲವು ವರ್ಷಗಳಿಂದ ನಿರುಪಯುಕ್ತವಾಗಿದ್ದ ಕೆರೆಯ ಹೂಳು ತೆಗೆಯಿಸಿ, ಸುತ್ತಲೂ ಏರಿ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಇದೇ ಮಾದರಿಯಲ್ಲಿ ಪಂಚಾಯಿತಿ ವ್ಯಾಪ್ತಿಯ ಇತರೆ ಕೆರೆಗಳನ್ನು ಅಭಿವೃದ್ಧಿಪಡಿಸಲಿದ್ದೇವೆ’ ಎಂದರು.</p>.<p>ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಅಂತರರಾಷ್ಟ್ರೀಯ ವಿಮಾನನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಗಿರೀಶ್, ಎನ್.ಮುನೇಗೌಡ, ಬಿಜೆಪಿ ಮುಖಂಡರಾದ ದೊಡ್ಡಬಸವರಾಜು, ಡಿ.ಜಗನ್ನಾಥ್, ಟಿ.ಪಿ.ಪ್ರಕಾಶ್, ದೀಪು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>