<p><strong>ಬೆಂಗಳೂರು</strong>: ‘ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣಾ ಸಂಘದ (ಹಾಪ್ಕಾಮ್ಸ್) ಸಂಸ್ಥಾಪಕ ಎಂ.ಎಚ್.ಮರಿಗೌಡ ಅವರ ಜನ್ಮದಿನದ ಅಂಗವಾಗಿ ಸಂಸ್ಥೆಯ ಮಳಿಗೆಗಳಲ್ಲಿ ₹500ಕ್ಕಿಂತ ಮೇಲ್ಪಟ್ಟು ಉತ್ಪನ್ನಗಳನ್ನು ಖರೀದಿಸುವ ಗ್ರಾಹಕರಿಗೆ ಹೂವಿನ ಅಥವಾ ಅಲಂಕಾರಿಕ ಸಸಿಗಳನ್ನು ಉಚಿತವಾಗಿ ವಿತರಿಸಲಾಗುವುದು’ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಉಮೇಶ್ ಎಸ್.ಮಿರ್ಜಿ ತಿಳಿಸಿದರು.</p>.<p>ಹಾಪ್ಕಾಮ್ಸ್ ಕೇಂದ್ರ ಕಚೇರಿಯಲ್ಲಿ ಗ್ರಾಹಕರಿಗೆ ಸಸಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ತೋಟಗಾರಿಕೆ ಇಲಾಖೆಯ ಪಿತಾಮಹ ಹಾಗೂಸಸ್ಯಪ್ರೇಮಿಯೂ ಆಗಿದ್ದ ಎಂ.ಎಚ್.ಮರಿಗೌಡ ಅವರನ್ನು ಸ್ಮರಿಸುವ ಉದ್ದೇಶದಿಂದ ಸಂಸ್ಥೆಯ ಆಯ್ದ 50ಕ್ಕೂ ಹೆಚ್ಚು ಮಳಿಗೆಗಳಲ್ಲಿ ಗ್ರಾಹಕರಿಗೆ 2 ಸಾವಿರ ಸಸಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದರು.</p>.<p>‘ಶನಿವಾರವೇ ಸಾಕಷ್ಟು ಮಂದಿ ಗ್ರಾಹಕರು ಉತ್ಪನ್ನ ಖರೀದಿಸಿ, ಸಸಿಗಳನ್ನು ಪಡೆದಿದ್ದಾರೆ. ಸೋಮವಾರದಿಂದ ಸಸಿಗಳ ವಿತರಣೆ ಮುಂದುವರಿಯಲಿದೆ. ಬರುವ ವರ್ಷ ಗ್ರಾಹಕರಿಗೆ ಹಣ್ಣಿನ ಸಸಿಗಳನ್ನು ವಿತರಿಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.</p>.<p>ಹಾಪ್ಕಾಮ್ಸ್ ಅಧ್ಯಕ್ಷ ಎನ್.ದೇವರಾಜು,‘ರೈತರ ಬಗ್ಗೆ ಕಳಕಳಿ, ದೂರದೃಷ್ಟಿ ಹೊಂದಿದ್ದ ಮರಿಗೌಡ ಅವರು ಹಾಪ್ಕಾಮ್ಸ್ ಸಂಸ್ಥೆ ಹುಟ್ಟುಹಾಕಿದರು. ರೈತರಿಗೆ ಒಳ್ಳೆಯ ಸಸಿಗಳು ಸಿಗಬೇಕೆಂದು ರಾಜ್ಯದ ಹಲವು ಸ್ಥಳಗಳಲ್ಲಿ ನರ್ಸರಿಗಳನ್ನು ತೆರೆದಿದ್ದರು. ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣಾ ಸಂಘದ (ಹಾಪ್ಕಾಮ್ಸ್) ಸಂಸ್ಥಾಪಕ ಎಂ.ಎಚ್.ಮರಿಗೌಡ ಅವರ ಜನ್ಮದಿನದ ಅಂಗವಾಗಿ ಸಂಸ್ಥೆಯ ಮಳಿಗೆಗಳಲ್ಲಿ ₹500ಕ್ಕಿಂತ ಮೇಲ್ಪಟ್ಟು ಉತ್ಪನ್ನಗಳನ್ನು ಖರೀದಿಸುವ ಗ್ರಾಹಕರಿಗೆ ಹೂವಿನ ಅಥವಾ ಅಲಂಕಾರಿಕ ಸಸಿಗಳನ್ನು ಉಚಿತವಾಗಿ ವಿತರಿಸಲಾಗುವುದು’ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಉಮೇಶ್ ಎಸ್.ಮಿರ್ಜಿ ತಿಳಿಸಿದರು.</p>.<p>ಹಾಪ್ಕಾಮ್ಸ್ ಕೇಂದ್ರ ಕಚೇರಿಯಲ್ಲಿ ಗ್ರಾಹಕರಿಗೆ ಸಸಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ತೋಟಗಾರಿಕೆ ಇಲಾಖೆಯ ಪಿತಾಮಹ ಹಾಗೂಸಸ್ಯಪ್ರೇಮಿಯೂ ಆಗಿದ್ದ ಎಂ.ಎಚ್.ಮರಿಗೌಡ ಅವರನ್ನು ಸ್ಮರಿಸುವ ಉದ್ದೇಶದಿಂದ ಸಂಸ್ಥೆಯ ಆಯ್ದ 50ಕ್ಕೂ ಹೆಚ್ಚು ಮಳಿಗೆಗಳಲ್ಲಿ ಗ್ರಾಹಕರಿಗೆ 2 ಸಾವಿರ ಸಸಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದರು.</p>.<p>‘ಶನಿವಾರವೇ ಸಾಕಷ್ಟು ಮಂದಿ ಗ್ರಾಹಕರು ಉತ್ಪನ್ನ ಖರೀದಿಸಿ, ಸಸಿಗಳನ್ನು ಪಡೆದಿದ್ದಾರೆ. ಸೋಮವಾರದಿಂದ ಸಸಿಗಳ ವಿತರಣೆ ಮುಂದುವರಿಯಲಿದೆ. ಬರುವ ವರ್ಷ ಗ್ರಾಹಕರಿಗೆ ಹಣ್ಣಿನ ಸಸಿಗಳನ್ನು ವಿತರಿಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.</p>.<p>ಹಾಪ್ಕಾಮ್ಸ್ ಅಧ್ಯಕ್ಷ ಎನ್.ದೇವರಾಜು,‘ರೈತರ ಬಗ್ಗೆ ಕಳಕಳಿ, ದೂರದೃಷ್ಟಿ ಹೊಂದಿದ್ದ ಮರಿಗೌಡ ಅವರು ಹಾಪ್ಕಾಮ್ಸ್ ಸಂಸ್ಥೆ ಹುಟ್ಟುಹಾಕಿದರು. ರೈತರಿಗೆ ಒಳ್ಳೆಯ ಸಸಿಗಳು ಸಿಗಬೇಕೆಂದು ರಾಜ್ಯದ ಹಲವು ಸ್ಥಳಗಳಲ್ಲಿ ನರ್ಸರಿಗಳನ್ನು ತೆರೆದಿದ್ದರು. ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>