<p><strong>ಬೆಂಗಳೂರು:</strong>ಹೊರಮಾವು ವಾರ್ಡ್ನದೊಡ್ಡಯ್ಯ ಬಡಾವಣೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯ ನಿವಾಸಿಗಳು ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಲು ಭಯಪಡುತ್ತಿದ್ದಾರೆ.</p>.<p>ಮಹಿಳೆಯರು ಹಾಗೂ ವೃದ್ಧರು ರಸ್ತೆಯಲ್ಲಿ ಒಬ್ಬಂಟಿಯಾಗಿ ಓಡಾಡಲೂ ಹಿಂದೇಟು ಹಾಕುತ್ತಿದ್ದಾರೆ. ಗುಂಪು ಕಟ್ಟಿಕೊಂಡು ಓಡಾಡುತ್ತಿರುವ ಬೀದಿನಾಯಿಗಳು ಗುರಾಯಿಸಿ ದಾಳಿ ಮುನ್ಸೂಚನೆ ನೀಡುತ್ತಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.</p>.<p>‘ಕಳೆದ ವರ್ಷ ಜೂನ್ 27ರಂದು ದೊಡ್ಡಯ್ಯ ಬಡಾವಣೆಯಲ್ಲೇ ಮಗುವೊಂದನ್ನು ನಾಯಿ ಎಳೆದೊಯ್ದಿತ್ತು. ಆ ಭಯಾನಕ ದೃಶ್ಯ ಸಿ.ಸಿ.ಟಿ.ವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅದನ್ನು ನೋಡಿದಾಗಿನಿಂದ ಈ ಪ್ರದೇಶದಲ್ಲಿ ಓಡಾಡಲು ಭಯವಾಗುತ್ತಿದೆ’ ಎಂದು ಸ್ಥಳೀಯ ನಿವಾಸಿಗಳು ಹೇಳಿದರು.</p>.<p>‘ಪದೇ ಪದೇ ಜನರನ್ನು ಬೆನ್ನಟ್ಟಿರುವ ಹತ್ತಕ್ಕೂ ಹೆಚ್ಚು ಬೀದಿನಾಯಿಗಳ ವಿರುದ್ಧ ಪೊಲೀಸ್ ಠಾಣೆಗೆದೂರು ನೀಡಲಾಗಿದೆ. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ನಾಯಿಗಳಿಂದ ಏನಾದರೂ ಅನಾಹುತಗಳು ಸಂಭವಿಸಿದರೆ ಯಾರು ಹೊಣೆ’ ಎಂದು ಅವರು ಪ್ರಶ್ನಿಸಿದರು.</p>.<p class="Subhead"><strong>ದೂರು –ಪ್ರತಿದೂರು: </strong>ನಾಯಿಗಳ ವಿರುದ್ಧ ಸ್ಥಳೀಯರು ದೂರು ನೀಡಿದರೆ, ಕೆಲ ಪ್ರಾಣಿ ಪ್ರಿಯರು ಸಹ ಪ್ರತಿ ದೂರು ನೀಡಿದ್ದಾರೆ.</p>.<p>‘ನಾಯಿಗಳನ್ನು ಸ್ಥಳೀಯರು ಹಿಂಸಿಸುತ್ತಿರುವುದಾಗಿ ಪ್ರಾಣಿಪ್ರಿಯರು ಆರೋಪಿಸುತ್ತಿದ್ದಾರೆ. ಬಿಬಿಎಂಪಿ ಹಾಗೂ ಸ್ಥಳೀಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದುವರಿಯಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p class="Subhead">ಸಭೆಯಲ್ಲಿ ಪ್ರಸ್ತಾಪ: ‘ಬೀದಿನಾಯಿಗಳ ಬಗ್ಗೆ ಸ್ಥಳೀಯರು ಸಾಕಷ್ಟು ಬಾರಿ ದೂರು ನೀಡಿದ್ದಾರೆ. ಮನುಷ್ಯರ ಜೀವಕ್ಕೆ ಅಪಾಯವನ್ನುಂಟು ಮಾಡುವ ಬೀದಿನಾಯಿಗಳ ಸ್ಥಳಾಂತರ ಸಂಬಂಧ ನಿರ್ಣಯ ಅಂಗೀಕರಿಸುವಂತೆ ಬಿಬಿಎಂಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಿದ್ದೇನೆ’ ಎಂದು ಹೊರಮಾವು ವಾರ್ಡ್ನ ಸದಸ್ಯೆ ರಾಧಮ್ಮ ವೆಂಕಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕೆಲವರು ಬೀದಿನಾಯಿಗಳನ್ನು ಗುಂಪಾಗಿ ಸೇರಿಸಿ ಮಾಂಸವನ್ನು ಹಾಕುತ್ತಿದ್ದಾರೆ. ಬೇರೆ ಪ್ರದೇಶದ ನಾಯಿಗಳು ಸಹ ದೊಡ್ಡಯ್ಯ ಬಡಾವಣೆಗೆ ಬರುತ್ತಿವೆ. ದಿನದಿಂದ ದಿನಕ್ಕೆ ಅವುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮನುಷ್ಯರು ರಸ್ತೆಯಲ್ಲಿ ಓಡಾಡದಂಥ ಸ್ಥಿತಿಯೂ ನಿರ್ಮಾಣವಾಗುತ್ತಿದೆ’ ಎಂದರು.</p>.<p>‘ಬೀದಿನಾಯಿಗಳ ದಾಳಿಯಿಂದ ಇದುವರೆಗೆ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅವರೆಲ್ಲ ಬಿಬಿಎಂಪಿ, ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಾಣಿ ಪ್ರಿಯರ ವಿರೋಧವಿರುವುದರಿಂದ ನಾಯಿಗಳನ್ನು ಸ್ಥಳಾಂತರಿಸಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಬಗೆಹರಿಸಲು ಸ್ಥಳೀಯರು, ಪ್ರಾಣಿ ಪ್ರಿಯರು, ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರ ಸಭೆಯನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಶನಿವಾರವೂ ಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ರಾಧಮ್ಮ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಹೊರಮಾವು ವಾರ್ಡ್ನದೊಡ್ಡಯ್ಯ ಬಡಾವಣೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯ ನಿವಾಸಿಗಳು ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಲು ಭಯಪಡುತ್ತಿದ್ದಾರೆ.</p>.<p>ಮಹಿಳೆಯರು ಹಾಗೂ ವೃದ್ಧರು ರಸ್ತೆಯಲ್ಲಿ ಒಬ್ಬಂಟಿಯಾಗಿ ಓಡಾಡಲೂ ಹಿಂದೇಟು ಹಾಕುತ್ತಿದ್ದಾರೆ. ಗುಂಪು ಕಟ್ಟಿಕೊಂಡು ಓಡಾಡುತ್ತಿರುವ ಬೀದಿನಾಯಿಗಳು ಗುರಾಯಿಸಿ ದಾಳಿ ಮುನ್ಸೂಚನೆ ನೀಡುತ್ತಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.</p>.<p>‘ಕಳೆದ ವರ್ಷ ಜೂನ್ 27ರಂದು ದೊಡ್ಡಯ್ಯ ಬಡಾವಣೆಯಲ್ಲೇ ಮಗುವೊಂದನ್ನು ನಾಯಿ ಎಳೆದೊಯ್ದಿತ್ತು. ಆ ಭಯಾನಕ ದೃಶ್ಯ ಸಿ.ಸಿ.ಟಿ.ವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅದನ್ನು ನೋಡಿದಾಗಿನಿಂದ ಈ ಪ್ರದೇಶದಲ್ಲಿ ಓಡಾಡಲು ಭಯವಾಗುತ್ತಿದೆ’ ಎಂದು ಸ್ಥಳೀಯ ನಿವಾಸಿಗಳು ಹೇಳಿದರು.</p>.<p>‘ಪದೇ ಪದೇ ಜನರನ್ನು ಬೆನ್ನಟ್ಟಿರುವ ಹತ್ತಕ್ಕೂ ಹೆಚ್ಚು ಬೀದಿನಾಯಿಗಳ ವಿರುದ್ಧ ಪೊಲೀಸ್ ಠಾಣೆಗೆದೂರು ನೀಡಲಾಗಿದೆ. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ನಾಯಿಗಳಿಂದ ಏನಾದರೂ ಅನಾಹುತಗಳು ಸಂಭವಿಸಿದರೆ ಯಾರು ಹೊಣೆ’ ಎಂದು ಅವರು ಪ್ರಶ್ನಿಸಿದರು.</p>.<p class="Subhead"><strong>ದೂರು –ಪ್ರತಿದೂರು: </strong>ನಾಯಿಗಳ ವಿರುದ್ಧ ಸ್ಥಳೀಯರು ದೂರು ನೀಡಿದರೆ, ಕೆಲ ಪ್ರಾಣಿ ಪ್ರಿಯರು ಸಹ ಪ್ರತಿ ದೂರು ನೀಡಿದ್ದಾರೆ.</p>.<p>‘ನಾಯಿಗಳನ್ನು ಸ್ಥಳೀಯರು ಹಿಂಸಿಸುತ್ತಿರುವುದಾಗಿ ಪ್ರಾಣಿಪ್ರಿಯರು ಆರೋಪಿಸುತ್ತಿದ್ದಾರೆ. ಬಿಬಿಎಂಪಿ ಹಾಗೂ ಸ್ಥಳೀಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದುವರಿಯಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p class="Subhead">ಸಭೆಯಲ್ಲಿ ಪ್ರಸ್ತಾಪ: ‘ಬೀದಿನಾಯಿಗಳ ಬಗ್ಗೆ ಸ್ಥಳೀಯರು ಸಾಕಷ್ಟು ಬಾರಿ ದೂರು ನೀಡಿದ್ದಾರೆ. ಮನುಷ್ಯರ ಜೀವಕ್ಕೆ ಅಪಾಯವನ್ನುಂಟು ಮಾಡುವ ಬೀದಿನಾಯಿಗಳ ಸ್ಥಳಾಂತರ ಸಂಬಂಧ ನಿರ್ಣಯ ಅಂಗೀಕರಿಸುವಂತೆ ಬಿಬಿಎಂಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಿದ್ದೇನೆ’ ಎಂದು ಹೊರಮಾವು ವಾರ್ಡ್ನ ಸದಸ್ಯೆ ರಾಧಮ್ಮ ವೆಂಕಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕೆಲವರು ಬೀದಿನಾಯಿಗಳನ್ನು ಗುಂಪಾಗಿ ಸೇರಿಸಿ ಮಾಂಸವನ್ನು ಹಾಕುತ್ತಿದ್ದಾರೆ. ಬೇರೆ ಪ್ರದೇಶದ ನಾಯಿಗಳು ಸಹ ದೊಡ್ಡಯ್ಯ ಬಡಾವಣೆಗೆ ಬರುತ್ತಿವೆ. ದಿನದಿಂದ ದಿನಕ್ಕೆ ಅವುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮನುಷ್ಯರು ರಸ್ತೆಯಲ್ಲಿ ಓಡಾಡದಂಥ ಸ್ಥಿತಿಯೂ ನಿರ್ಮಾಣವಾಗುತ್ತಿದೆ’ ಎಂದರು.</p>.<p>‘ಬೀದಿನಾಯಿಗಳ ದಾಳಿಯಿಂದ ಇದುವರೆಗೆ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅವರೆಲ್ಲ ಬಿಬಿಎಂಪಿ, ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಾಣಿ ಪ್ರಿಯರ ವಿರೋಧವಿರುವುದರಿಂದ ನಾಯಿಗಳನ್ನು ಸ್ಥಳಾಂತರಿಸಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಬಗೆಹರಿಸಲು ಸ್ಥಳೀಯರು, ಪ್ರಾಣಿ ಪ್ರಿಯರು, ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರ ಸಭೆಯನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಶನಿವಾರವೂ ಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ರಾಧಮ್ಮ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>