<p><strong>ಕೆ.ಆರ್.ಪುರ:</strong> ಕುಡಿಯುವ ನೀರು, ರಸ್ತೆ, ಚರಂಡಿ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹೊರಮಾವು ಅಗರ ಸರ್ಕಾರಿ ನ್ಯಾಯಬೆಲೆ ಅಂಗಡಿ ಮುಂಭಾಗದಿಂದ ಬಿಬಿಎಂಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ಹೊರಮಾವು ವಾರ್ಡ್ ವ್ಯಾಪ್ತಿಯಲ್ಲಿರುವ ದಲಿತ ಕಾಲೊನಿಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿಯಂತಹ ಮೂಲಸೌಕರ್ಯಗಳಿಲ್ಲದೆ ಜನರು ಪರದಾಡುವಂತಾಗಿದೆ. ಇದರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಅಪಾರ್ಟ್ಮೆಂಟ್ ಮತ್ತು ಬಡಾವಣೆಗಳಿಗೆ ಕುಡಿಯುವ ನೀರು ಸರಬರಾಜಾಗುತ್ತಿದೆ. ಆದರೆ ಅದೇ ಗ್ರಾಮಗಳಲ್ಲಿ ವಾಸಿಸುವ ದಲಿತ ಕಾಲೊನಿಗಳಿಗೆ ನೀರು ಬಿಡುತ್ತಿಲ್ಲ‘ ಎಂದು ದೂರಿದರು.</p>.<p>‘ಹೊರಮಾವು ಅಗರ ಬಸ್ ನಿಲ್ದಾಣದಲ್ಲಿ ನಿರ್ಮಿಸಿರುವ ಶೌಚಾಲಯವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು. ಹೊರಮಾವು ಅಗರ ನಾಗರಕಟ್ಟೆ ಬಳಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಗ್ರಂಥಾಲಯಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಮತ್ತು ಬೀದಿ ದೀಪ ಅಳವಡಿಸಬೇಕು. ಬಿಬಿಎಂಪಿ ವತಿಯಿಂದ ಮನೆ ನಿರ್ಮಿಸಿ ಕೊಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬೆಂಗಳೂರು ಪೂರ್ವ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ್, ಡಾ.ಬಿ.ಆರ್.ಅಂಬೇಡ್ಕರ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಜ್ಯೋತಿನಗರ ಮುನಿಕೃಷ್ಣ, ಸಾಮ್ರಾಟ್ ಶೇಖರ್, ನಾರಾಯಣಸ್ವಾಮಿ, ಲಕ್ಷ್ಮೀನಾರಾಯಣ, ಶ್ವೇತಾ, ಶ್ರೀನಿವಾಸ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಕುಡಿಯುವ ನೀರು, ರಸ್ತೆ, ಚರಂಡಿ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹೊರಮಾವು ಅಗರ ಸರ್ಕಾರಿ ನ್ಯಾಯಬೆಲೆ ಅಂಗಡಿ ಮುಂಭಾಗದಿಂದ ಬಿಬಿಎಂಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ಹೊರಮಾವು ವಾರ್ಡ್ ವ್ಯಾಪ್ತಿಯಲ್ಲಿರುವ ದಲಿತ ಕಾಲೊನಿಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿಯಂತಹ ಮೂಲಸೌಕರ್ಯಗಳಿಲ್ಲದೆ ಜನರು ಪರದಾಡುವಂತಾಗಿದೆ. ಇದರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಅಪಾರ್ಟ್ಮೆಂಟ್ ಮತ್ತು ಬಡಾವಣೆಗಳಿಗೆ ಕುಡಿಯುವ ನೀರು ಸರಬರಾಜಾಗುತ್ತಿದೆ. ಆದರೆ ಅದೇ ಗ್ರಾಮಗಳಲ್ಲಿ ವಾಸಿಸುವ ದಲಿತ ಕಾಲೊನಿಗಳಿಗೆ ನೀರು ಬಿಡುತ್ತಿಲ್ಲ‘ ಎಂದು ದೂರಿದರು.</p>.<p>‘ಹೊರಮಾವು ಅಗರ ಬಸ್ ನಿಲ್ದಾಣದಲ್ಲಿ ನಿರ್ಮಿಸಿರುವ ಶೌಚಾಲಯವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು. ಹೊರಮಾವು ಅಗರ ನಾಗರಕಟ್ಟೆ ಬಳಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಗ್ರಂಥಾಲಯಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಮತ್ತು ಬೀದಿ ದೀಪ ಅಳವಡಿಸಬೇಕು. ಬಿಬಿಎಂಪಿ ವತಿಯಿಂದ ಮನೆ ನಿರ್ಮಿಸಿ ಕೊಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬೆಂಗಳೂರು ಪೂರ್ವ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ್, ಡಾ.ಬಿ.ಆರ್.ಅಂಬೇಡ್ಕರ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಜ್ಯೋತಿನಗರ ಮುನಿಕೃಷ್ಣ, ಸಾಮ್ರಾಟ್ ಶೇಖರ್, ನಾರಾಯಣಸ್ವಾಮಿ, ಲಕ್ಷ್ಮೀನಾರಾಯಣ, ಶ್ವೇತಾ, ಶ್ರೀನಿವಾಸ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>