ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಬೆಂಗಳೂರು | ಕುದುರೆ ರೇಸ್ ಬೆಟ್ಟಿಂಗ್: ಇಬ್ಬರು ವಶಕ್ಕೆ

Published 28 ಏಪ್ರಿಲ್ 2024, 11:38 IST
Last Updated 28 ಏಪ್ರಿಲ್ 2024, 11:38 IST
ಅಕ್ಷರ ಗಾತ್ರ

‌ಬೆಂಗಳೂರು: ಕುದುರೆ ರೇಸ್‌ಗಳ ಮೇಲೆ ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಶೇಷಾದ್ರಿಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಕುದುರೆ ರೇಸ್ ಬೆಟ್ಟಿಂಗ್ ಬಗ್ಗೆ ಮಾಹಿತಿ ಬಂದಿತ್ತು. ರಾಜೀವ್ ಗಾಂಧಿ ವೃತ್ತ ಬಳಿ ಹೋಟೆಲ್‌ವೊಂದರ ಮೇಲೆ ದಾಳಿ ಮಾಡಿ ಆರೋಪಿಗಳಾದ ಕೆ. ಸುರೇಶ್ ಹಾಗೂ ಎನ್. ಆನಂದ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಇವರಿಂದ ₹ 8,100 ನಗದು, ಎರಡು ಮೊಬೈಲ್ ಹಾಗೂ ಬೆಟ್ಟಿಂಗ್‌ಗೆ ಸಂಬಂಧಪಟ್ಟ ಸಾಮಗ್ರಿ ಜಪ್ತಿ ಮಾಡಲಾಗಿದೆ’ ಎಂದು ಮೂಲಗಳು ಹೇಳಿವೆ.

‘ದೇಶದ ವಿವಿಧೆಡೆ ನಡೆಯುವ ಕುದುರೆ ರೇಸ್‌ಗಳ ಬಗ್ಗೆ ಜಾಲತಾಣದ ಮೂಲಕ ಆರೋಪಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದರು. ನಂತರ, ಜನರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದರು. ಆರೋಪಿಗಳು ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದರು’ ಎಂದು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT