‘ಈ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದ್ದಾಗ ಈ ಪ್ರದೇಶದಲ್ಲಿ ವಾಹನ ದಟ್ಟಣೆ ಹೆಚ್ಚು ಇರಲಿಲ್ಲ. ಸಮುದಾಯ ಭವನದ ಕಡೆಯ ರಸ್ತೆ ಸೇರುವಲ್ಲಿ ಬ್ಯಾರಿಕೇಡ್ ಅಳವಡಿಸಿದಾಗ ಮೆಟ್ರೊ ಪ್ರಯಾಣಿಕರು ಈ 300 ಮೀಟರ್ ಉದ್ದದ ರಸ್ತೆಯನ್ನು ವಾಹನ ನಿಲ್ಲಿಸುವುದಕ್ಕೆ ಬಳಸಿಕೊಳ್ಳುತ್ತಿದ್ದರು. ಈಗ ಇಲ್ಲಿನ ಮಹಾಗಣಪತಿ ಗಂಗಾಧರೇಶ್ವರ ಸ್ವಾಮಿ, ಪಾರ್ವತಿದೇವಿ ದೇವಸ್ಥಾನದ ಎದುರು ಬ್ಯಾರಿಕೇಡ್ ಅಳವಡಿಸಿ ಅದಕ್ಕೂ ನಿರ್ಬಂಧ ವಿಧಿಸಲಾಗಿದೆ’ ಎಂದು ಆಟೊರಿಕ್ಷಾ ಚಾಲಕ ಅಯೂಬ್ ಖಾನ್ ಬೇಸರ ವ್ಯಕ್ತಪಡಿಸುತ್ತಾರೆ.