<p>ಬೆಂಗಳೂರು: ನಗರದ ಹೊಸಹಳ್ಳಿಯ ಮೆಟ್ರೊ ನಿಲ್ದಾಣದ ಪಕ್ಕದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಪೊಲೀಸರು ವಾಹನ ಸಂಚಾರ ನಿರ್ಬಂಧಿಸಿದ್ದು, ಸಾರ್ವಜನಿಕರಿಂದ ಪ್ರತಿರೋಧ ವ್ಯಕ್ತವಾಗಿದೆ.</p>.<p>ಆದಿಚುಂಚನಗಿರಿ ಮಠದ ಸಮುದಾಯ ಭವನದ ಕಡೆಯಿಂದ ಬರುವ ರಸ್ತೆಯು ಸರ್ವಿಸ್ ರಸ್ತೆಯನ್ನು ಸಂಪರ್ಕಿಸುತ್ತದೆ. ಇಲ್ಲಿ ಸಂಚಾರ ಪೊಲೀಸರು ಏಳೆಂಟು ತಿಂಗಳ ಹಿಂದೆಯೇ ಸರ್ವಿಸ್ ರಸ್ತೆಗೆ ಅಡ್ಡವಾಗಿ ಬ್ಯಾರಿಕೇಡ್ಗಳನ್ನು ಇಟ್ಟಿದ್ದರು. ಆಗ ಒಂದು ಬದಿಯಿಂದ ವಾಹನಗಳು ಈ ರಸ್ತೆಗೆ ಬರುವುದು ಸ್ಥಗಿತಗೊಂಡಿತ್ತು.</p>.<p>ಎರಡು ತಿಂಗಳ ಹಿಂದೆ ಇದೇ ರಸ್ತೆಯ ಇನ್ನೊಂದು ಬದಿಗೂ ಬ್ಯಾರಿಕೇಡ್ ಅಳವಡಿಸಲಾಗಿದೆ. ಮಹಾ ಗಣಪತಿ ಗಂಗಾಧರೇಶ್ವರ ಸ್ವಾಮಿ, ಪಾರ್ವತಿ ದೇವಿ ದೇವಸ್ಥಾನದ ಮುಂದೆ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಲಾಗಿದೆ. ಹಾಗಾಗಿ ಈ ರಸ್ತೆಯ ಸುಮಾರು 300 ಮೀಟರ್ ಉದ್ದದಷ್ಟು ಭಾಗ ಸಾರ್ವಜನಿಕರ ಬಳಕೆಗೆ ಲಭ್ಯವೇ ಇಲ್ಲದಂತಾಗಿದೆ ಎಂದು ದೂರುತ್ತಾರೆ ಸ್ಥಳೀಯರು.</p>.<p>‘ಈ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದ್ದಾಗ ಈ ಪ್ರದೇಶದಲ್ಲಿ ವಾಹನ ದಟ್ಟಣೆ ಹೆಚ್ಚು ಇರಲಿಲ್ಲ. ಸಮುದಾಯ ಭವನದ ಕಡೆಯ ರಸ್ತೆ ಸೇರುವಲ್ಲಿ ಬ್ಯಾರಿಕೇಡ್ ಅಳವಡಿಸಿದಾಗ ಮೆಟ್ರೊ ಪ್ರಯಾಣಿಕರು ಈ 300 ಮೀಟರ್ ಉದ್ದದ ರಸ್ತೆಯನ್ನು ವಾಹನ ನಿಲ್ಲಿಸುವುದಕ್ಕೆ ಬಳಸಿಕೊಳ್ಳುತ್ತಿದ್ದರು. ಈಗ ಇಲ್ಲಿನ ಮಹಾಗಣಪತಿ ಗಂಗಾಧರೇಶ್ವರ ಸ್ವಾಮಿ, ಪಾರ್ವತಿದೇವಿ ದೇವಸ್ಥಾನದ ಎದುರು ಬ್ಯಾರಿಕೇಡ್ ಅಳವಡಿಸಿ ಅದಕ್ಕೂ ನಿರ್ಬಂಧ ವಿಧಿಸಲಾಗಿದೆ’ ಎಂದು ಆಟೊರಿಕ್ಷಾ ಚಾಲಕ ಅಯೂಬ್ ಖಾನ್ ಬೇಸರ ವ್ಯಕ್ತಪಡಿಸುತ್ತಾರೆ.</p>.<p>ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಹೊಸಹಳ್ಳಿ ಬಳಿ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ವಾಹನ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಈ ಸರ್ವಿಸ್ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರೆ ಸಮಸ್ಯೆ ನಿವಾರಣೆ ಆಗುತ್ತದೆ ಎನ್ನುತ್ತಾರೆ ಖಾನ್.</p>.<p>‘ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸುವಂತೆ ಮಠದ ವತಿಯಿಂದ ಸಂಚಾರ ಪೊಲೀಸರನ್ನು ಕೋರಿಲ್ಲ. ಅವರು ಸಂಚಾರ ದಟ್ಟಣೆ ನಿಯಂತ್ರಣದ ಸಲುವಾಗಿ ಈ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸುವುದಕ್ಕೆ ನಮ್ಮಿಂದ ಯಾವ ಆಕ್ಷೇಪವೂ ಇಲ್ಲ’ ಎಂದು ಮಠದ ಸೌಮ್ಯನಾಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.</p>.<p>**</p>.<p>ಸರ್ವಿಸ್ ರಸ್ತೆಯ ಈ ಭಾಗವು ಮಠಕ್ಕೆ ಬರುವ ಗಣ್ಯರ ವಾಹನಗಳ ಸಂಚಾರಕ್ಕೆ ಸೀಮಿತವಾಗಿದೆ. ಇದನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು<br /><em><strong>– ವಸಂತ, ಸ್ಥಳೀಯ ನಿವಾಸಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ ಹೊಸಹಳ್ಳಿಯ ಮೆಟ್ರೊ ನಿಲ್ದಾಣದ ಪಕ್ಕದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಪೊಲೀಸರು ವಾಹನ ಸಂಚಾರ ನಿರ್ಬಂಧಿಸಿದ್ದು, ಸಾರ್ವಜನಿಕರಿಂದ ಪ್ರತಿರೋಧ ವ್ಯಕ್ತವಾಗಿದೆ.</p>.<p>ಆದಿಚುಂಚನಗಿರಿ ಮಠದ ಸಮುದಾಯ ಭವನದ ಕಡೆಯಿಂದ ಬರುವ ರಸ್ತೆಯು ಸರ್ವಿಸ್ ರಸ್ತೆಯನ್ನು ಸಂಪರ್ಕಿಸುತ್ತದೆ. ಇಲ್ಲಿ ಸಂಚಾರ ಪೊಲೀಸರು ಏಳೆಂಟು ತಿಂಗಳ ಹಿಂದೆಯೇ ಸರ್ವಿಸ್ ರಸ್ತೆಗೆ ಅಡ್ಡವಾಗಿ ಬ್ಯಾರಿಕೇಡ್ಗಳನ್ನು ಇಟ್ಟಿದ್ದರು. ಆಗ ಒಂದು ಬದಿಯಿಂದ ವಾಹನಗಳು ಈ ರಸ್ತೆಗೆ ಬರುವುದು ಸ್ಥಗಿತಗೊಂಡಿತ್ತು.</p>.<p>ಎರಡು ತಿಂಗಳ ಹಿಂದೆ ಇದೇ ರಸ್ತೆಯ ಇನ್ನೊಂದು ಬದಿಗೂ ಬ್ಯಾರಿಕೇಡ್ ಅಳವಡಿಸಲಾಗಿದೆ. ಮಹಾ ಗಣಪತಿ ಗಂಗಾಧರೇಶ್ವರ ಸ್ವಾಮಿ, ಪಾರ್ವತಿ ದೇವಿ ದೇವಸ್ಥಾನದ ಮುಂದೆ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಲಾಗಿದೆ. ಹಾಗಾಗಿ ಈ ರಸ್ತೆಯ ಸುಮಾರು 300 ಮೀಟರ್ ಉದ್ದದಷ್ಟು ಭಾಗ ಸಾರ್ವಜನಿಕರ ಬಳಕೆಗೆ ಲಭ್ಯವೇ ಇಲ್ಲದಂತಾಗಿದೆ ಎಂದು ದೂರುತ್ತಾರೆ ಸ್ಥಳೀಯರು.</p>.<p>‘ಈ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದ್ದಾಗ ಈ ಪ್ರದೇಶದಲ್ಲಿ ವಾಹನ ದಟ್ಟಣೆ ಹೆಚ್ಚು ಇರಲಿಲ್ಲ. ಸಮುದಾಯ ಭವನದ ಕಡೆಯ ರಸ್ತೆ ಸೇರುವಲ್ಲಿ ಬ್ಯಾರಿಕೇಡ್ ಅಳವಡಿಸಿದಾಗ ಮೆಟ್ರೊ ಪ್ರಯಾಣಿಕರು ಈ 300 ಮೀಟರ್ ಉದ್ದದ ರಸ್ತೆಯನ್ನು ವಾಹನ ನಿಲ್ಲಿಸುವುದಕ್ಕೆ ಬಳಸಿಕೊಳ್ಳುತ್ತಿದ್ದರು. ಈಗ ಇಲ್ಲಿನ ಮಹಾಗಣಪತಿ ಗಂಗಾಧರೇಶ್ವರ ಸ್ವಾಮಿ, ಪಾರ್ವತಿದೇವಿ ದೇವಸ್ಥಾನದ ಎದುರು ಬ್ಯಾರಿಕೇಡ್ ಅಳವಡಿಸಿ ಅದಕ್ಕೂ ನಿರ್ಬಂಧ ವಿಧಿಸಲಾಗಿದೆ’ ಎಂದು ಆಟೊರಿಕ್ಷಾ ಚಾಲಕ ಅಯೂಬ್ ಖಾನ್ ಬೇಸರ ವ್ಯಕ್ತಪಡಿಸುತ್ತಾರೆ.</p>.<p>ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಹೊಸಹಳ್ಳಿ ಬಳಿ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ವಾಹನ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಈ ಸರ್ವಿಸ್ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರೆ ಸಮಸ್ಯೆ ನಿವಾರಣೆ ಆಗುತ್ತದೆ ಎನ್ನುತ್ತಾರೆ ಖಾನ್.</p>.<p>‘ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸುವಂತೆ ಮಠದ ವತಿಯಿಂದ ಸಂಚಾರ ಪೊಲೀಸರನ್ನು ಕೋರಿಲ್ಲ. ಅವರು ಸಂಚಾರ ದಟ್ಟಣೆ ನಿಯಂತ್ರಣದ ಸಲುವಾಗಿ ಈ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸುವುದಕ್ಕೆ ನಮ್ಮಿಂದ ಯಾವ ಆಕ್ಷೇಪವೂ ಇಲ್ಲ’ ಎಂದು ಮಠದ ಸೌಮ್ಯನಾಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.</p>.<p>**</p>.<p>ಸರ್ವಿಸ್ ರಸ್ತೆಯ ಈ ಭಾಗವು ಮಠಕ್ಕೆ ಬರುವ ಗಣ್ಯರ ವಾಹನಗಳ ಸಂಚಾರಕ್ಕೆ ಸೀಮಿತವಾಗಿದೆ. ಇದನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು<br /><em><strong>– ವಸಂತ, ಸ್ಥಳೀಯ ನಿವಾಸಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>