<p><strong>ಬೆಂಗಳೂರು:</strong> ಹೊರವರ್ತುಲ ರಸ್ತೆಯ ಪಿಇಎಸ್ ಕಾಲೇಜು ಬಳಿಯ ಹೊಸಕೆರೆಹಳ್ಳಿ ಜಂಕ್ಷನ್ನಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ಅಕ್ಟೋಬರ್ನಲ್ಲಿ ನಾಗರಿಕರ ಸೇವೆಗೆ ಲಭ್ಯವಾಗುವಾಗುವಂತೆ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಾಜಕಾಲುವೆ ಬಫರ್ ಝೋನ್ನಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ಅವರು ಮೇಲ್ಸೇತುವೆ ಕಾಮಗಾರಿಯನ್ನು ವೀಕ್ಷಿಸಿದರು.</p>.<p>‘ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ 500 ಮೀ. ಉದ್ದದ್ದಾಗಿದ್ದು, ಶೇ 85ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ನಾಯಂಡಹಳ್ಳಿ ಜಂಕ್ಷನ್ ಕಡೆಯ ಡೌನ್ರ್ಯಾಂಪ್ ಕಾಮಗಾರಿ ಮಾತ್ರ ಬಾಕಿಯಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಹೊಸಕೆರೆಹಳ್ಳಿ ಕೆರೆಕೋಡಿ ರಸ್ತೆ ಬಳಿಯಿರುವ ಸುತ್ತಮುತ್ತಲಿನ ಅಡ್ಡರಸ್ತೆಗಳನ್ನು ಸುಗಮ ಸಂಚಾರಕ್ಕೆ ಅನುವಾಗುವಂತೆ ದುರಸ್ತಿ ಮಾಡಲು ಮಹೇಶ್ವರ್ ರಾವ್ ಹೇಳಿದರು.</p>.<p>ಹೊಸಕೆರೆಹಳ್ಳಿಯ ಶ್ರೀನಿವಾಸ ರಸ್ತೆಯಲ್ಲಿ ಜಲಮಂಡಳಿಯು ಸಂಪೂರ್ಣ ರಸ್ತೆಯನ್ನು ಅಗೆದು ಕಾಮಗಾರಿ ನಡೆಸಿದ್ದು, ಕಾಮಗಾರಿ ಪೂರ್ಣಗೊಂಡಿದ್ದರೂ ದುರಸ್ತಿ ಕಾರ್ಯ ನಡೆಸಿರುವುದಿಲ್ಲ. ಈ ಸಂಬಂಧ ಜಲಮಂಡಳಿ ಅಧಿಕಾರಿಗಳಿಗೆ ದುರಸ್ತಿ ಕಾರ್ಯ ಕೈಗೊಳ್ಳಲು ಸೂಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಬಿಎಂಆರ್ಡಿಎ ಆಯುಕ್ತ ರಾಜೇಂದ್ರ ಚೋಳನ್, ವಿಶೇಷ ಆಯುಕ್ತ ಕರೀಗೌಡ, ಆರ್.ಆರ್. ನಗರ ವಲಯ ಆಯುಕ್ತ ಸತೀಶ್, ಬಿ–ಸ್ಮೈಲ್ನ ತಾಂತ್ರಿಕ ನಿರ್ದೇಶಕ ಬಿ.ಎಸ್ ಪ್ರಹ್ಲಾದ್, ಮುಖ್ಯ ಎಂಜಿನಿಯರ್ ರಾಜೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೊರವರ್ತುಲ ರಸ್ತೆಯ ಪಿಇಎಸ್ ಕಾಲೇಜು ಬಳಿಯ ಹೊಸಕೆರೆಹಳ್ಳಿ ಜಂಕ್ಷನ್ನಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ಅಕ್ಟೋಬರ್ನಲ್ಲಿ ನಾಗರಿಕರ ಸೇವೆಗೆ ಲಭ್ಯವಾಗುವಾಗುವಂತೆ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಾಜಕಾಲುವೆ ಬಫರ್ ಝೋನ್ನಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ಅವರು ಮೇಲ್ಸೇತುವೆ ಕಾಮಗಾರಿಯನ್ನು ವೀಕ್ಷಿಸಿದರು.</p>.<p>‘ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ 500 ಮೀ. ಉದ್ದದ್ದಾಗಿದ್ದು, ಶೇ 85ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ನಾಯಂಡಹಳ್ಳಿ ಜಂಕ್ಷನ್ ಕಡೆಯ ಡೌನ್ರ್ಯಾಂಪ್ ಕಾಮಗಾರಿ ಮಾತ್ರ ಬಾಕಿಯಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಹೊಸಕೆರೆಹಳ್ಳಿ ಕೆರೆಕೋಡಿ ರಸ್ತೆ ಬಳಿಯಿರುವ ಸುತ್ತಮುತ್ತಲಿನ ಅಡ್ಡರಸ್ತೆಗಳನ್ನು ಸುಗಮ ಸಂಚಾರಕ್ಕೆ ಅನುವಾಗುವಂತೆ ದುರಸ್ತಿ ಮಾಡಲು ಮಹೇಶ್ವರ್ ರಾವ್ ಹೇಳಿದರು.</p>.<p>ಹೊಸಕೆರೆಹಳ್ಳಿಯ ಶ್ರೀನಿವಾಸ ರಸ್ತೆಯಲ್ಲಿ ಜಲಮಂಡಳಿಯು ಸಂಪೂರ್ಣ ರಸ್ತೆಯನ್ನು ಅಗೆದು ಕಾಮಗಾರಿ ನಡೆಸಿದ್ದು, ಕಾಮಗಾರಿ ಪೂರ್ಣಗೊಂಡಿದ್ದರೂ ದುರಸ್ತಿ ಕಾರ್ಯ ನಡೆಸಿರುವುದಿಲ್ಲ. ಈ ಸಂಬಂಧ ಜಲಮಂಡಳಿ ಅಧಿಕಾರಿಗಳಿಗೆ ದುರಸ್ತಿ ಕಾರ್ಯ ಕೈಗೊಳ್ಳಲು ಸೂಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಬಿಎಂಆರ್ಡಿಎ ಆಯುಕ್ತ ರಾಜೇಂದ್ರ ಚೋಳನ್, ವಿಶೇಷ ಆಯುಕ್ತ ಕರೀಗೌಡ, ಆರ್.ಆರ್. ನಗರ ವಲಯ ಆಯುಕ್ತ ಸತೀಶ್, ಬಿ–ಸ್ಮೈಲ್ನ ತಾಂತ್ರಿಕ ನಿರ್ದೇಶಕ ಬಿ.ಎಸ್ ಪ್ರಹ್ಲಾದ್, ಮುಖ್ಯ ಎಂಜಿನಿಯರ್ ರಾಜೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>