‘ಚೆನ್ನಾಗಿಯೇ ಇದ್ದ ಮೋರಿ, ರಸ್ತೆಯೆಲ್ಲ ಕಿತ್ತು ಹಾಕಿದ್ದಾರೆ. ಕೈಗೆತ್ತಿಕೊಂಡಿರುವ ಕಾಮಗಾರಿಯನ್ನೂ ಮುಗಿಸುತ್ತಿಲ್ಲ. ದತ್ತಾತ್ರೇಯ ದೇವಸ್ಥಾನ ಮುಖ್ಯರಸ್ತೆಯಲ್ಲಿ ಈ ಕಾಮಗಾರಿ ನಡೆಯುತ್ತಿದೆ. ಇಟ್ಟಮಡು, ಗುರುದತ್ತ ಬಡಾವಣೆ, ಕೃಷ್ಣಪ್ಪ ಬಡಾವಣೆಗೆ ಇದೇ ರಸ್ತೆಯ ಮೂಲಕ ಹೋಗಬೇಕು. ಕಾಮಗಾರಿ ನಡೆಯುತ್ತಿರುವುದರಿಂದ ಸುಮಾರು 3ರಿಂದ 4 ಕಿ.ಮೀ. ಸುತ್ತಿ ಬಳಸಿ ಸಾಗಬೇಕಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.