<p><strong>ಬೆಂಗಳೂರು: </strong>ಬಿಬಿಎಂಪಿಯ ಹೊಸಕೆರೆಹಳ್ಳಿ ವಾರ್ಡ್ ಸಂಖ್ಯೆ 161ರ ವ್ಯಾಪ್ತಿಯಲ್ಲಿ ಬರುವ ಗುರುದತ್ತ ಬಡಾವಣೆ ಹಾಗೂ ದತ್ತಾತ್ರೇಯ ಬಡಾವಣೆ ವ್ಯಾಪ್ತಿಯಲ್ಲಿ ಕಳೆದ ಏಳು ತಿಂಗಳಿನಿಂದ ಮಳೆನೀರುಗಾಲುವೆ ಮತ್ತು ದೊಡ್ಡ ಚರಂಡಿ ಕಾಮಗಾರಿ ಹಲವು ಸಮಸ್ಯೆಯನ್ನು ಸೃಷ್ಟಿಸುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಜೋರು ಮಳೆ ಸುರಿದಾಗ ನೀರು ಮನೆಗೆ ನುಗ್ಗುತ್ತಿತ್ತು. ಈ ಸಮಸ್ಯೆ ಪರಿಹಾರಕ್ಕಾಗಿ ಮಳೆನೀರುಗಾಲುವೆ ಮತ್ತು ದೊಡ್ಡಚರಂಡಿ ನಿರ್ಮಾಣ ಕಾರ್ಯವನ್ನು ಬಿಬಿಎಂಪಿಯಿಂದ ಕೈಗೆತ್ತಿಕೊಳ್ಳಲಾಗಿದೆ. ಆದರೆ, ಸುಮಾರು ಏಳು ತಿಂಗಳು ಕಳೆದರೂ ಕಾಮಗಾರಿ ಮುಗಿಯುತ್ತಿಲ್ಲ. ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ’ ಎಂದು ಗುರುದತ್ತ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಜೈಸಿಂಗ್ ಹೇಳಿದರು.</p>.<p>‘ಚೆನ್ನಾಗಿಯೇ ಇದ್ದ ಮೋರಿ, ರಸ್ತೆಯೆಲ್ಲ ಕಿತ್ತು ಹಾಕಿದ್ದಾರೆ. ಕೈಗೆತ್ತಿಕೊಂಡಿರುವ ಕಾಮಗಾರಿಯನ್ನೂ ಮುಗಿಸುತ್ತಿಲ್ಲ. ದತ್ತಾತ್ರೇಯ ದೇವಸ್ಥಾನ ಮುಖ್ಯರಸ್ತೆಯಲ್ಲಿ ಈ ಕಾಮಗಾರಿ ನಡೆಯುತ್ತಿದೆ. ಇಟ್ಟಮಡು, ಗುರುದತ್ತ ಬಡಾವಣೆ, ಕೃಷ್ಣಪ್ಪ ಬಡಾವಣೆಗೆ ಇದೇ ರಸ್ತೆಯ ಮೂಲಕ ಹೋಗಬೇಕು. ಕಾಮಗಾರಿ ನಡೆಯುತ್ತಿರುವುದರಿಂದ ಸುಮಾರು 3ರಿಂದ 4 ಕಿ.ಮೀ. ಸುತ್ತಿ ಬಳಸಿ ಸಾಗಬೇಕಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮಳೆ ನೀರು ಮನೆಯೊಳಗೆ ನುಗ್ಗದಂತೆ ತಡೆಯುವ ಉದ್ದೇಶದಿಂದ ನಡೆಯುತ್ತಿರುವ ಈ ಕಾಮಗಾರಿ ಸ್ವಾಗತಾರ್ಹವೇ. ಆದರೆ, ಅನಗತ್ಯ ವಿಳಂಬ ಮಾಡುತ್ತಿರುವುದರಿಂದ ಸ್ಥಳೀಯರಿಗೆ ಅನನುಕೂಲವಾಗುತ್ತಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳೀಯರೊಬ್ಬರು ಒತ್ತಾಯಿಸಿದರು.</p>.<p class="Subhead"><strong>ಕೋವಿಡ್ ಕಾರಣದಿಂದ ವಿಳಂಬ</strong></p>.<p>‘ಕಾಮಗಾರಿ ಚುರುಕಿನಿಂದ ನಡೆಯುತ್ತಿದ್ದು ಸದ್ಯ, ಕ್ರೇಟಿಂಗ್ ಅಳವಡಿಸಲಾಗುತ್ತಿದೆ. ಕೋವಿಡ್ ಇದ್ದುದರಿಂದ ಕಾರ್ಮಿಕರು ಸಿಗದೆ ಕಾಮಗಾರಿ ವಿಳಂಬವಾಗಿದೆ’ ಎಂದು ಬಿಬಿಎಂಪಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ್ ಹೇಳಿದರು.</p>.<p>‘ಅಂದಾಜು ₹3 ಕೋಟಿ ಅನುದಾನ ಒದಗಿಸಲಾಗಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಲು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಬಿಎಂಪಿಯ ಹೊಸಕೆರೆಹಳ್ಳಿ ವಾರ್ಡ್ ಸಂಖ್ಯೆ 161ರ ವ್ಯಾಪ್ತಿಯಲ್ಲಿ ಬರುವ ಗುರುದತ್ತ ಬಡಾವಣೆ ಹಾಗೂ ದತ್ತಾತ್ರೇಯ ಬಡಾವಣೆ ವ್ಯಾಪ್ತಿಯಲ್ಲಿ ಕಳೆದ ಏಳು ತಿಂಗಳಿನಿಂದ ಮಳೆನೀರುಗಾಲುವೆ ಮತ್ತು ದೊಡ್ಡ ಚರಂಡಿ ಕಾಮಗಾರಿ ಹಲವು ಸಮಸ್ಯೆಯನ್ನು ಸೃಷ್ಟಿಸುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಜೋರು ಮಳೆ ಸುರಿದಾಗ ನೀರು ಮನೆಗೆ ನುಗ್ಗುತ್ತಿತ್ತು. ಈ ಸಮಸ್ಯೆ ಪರಿಹಾರಕ್ಕಾಗಿ ಮಳೆನೀರುಗಾಲುವೆ ಮತ್ತು ದೊಡ್ಡಚರಂಡಿ ನಿರ್ಮಾಣ ಕಾರ್ಯವನ್ನು ಬಿಬಿಎಂಪಿಯಿಂದ ಕೈಗೆತ್ತಿಕೊಳ್ಳಲಾಗಿದೆ. ಆದರೆ, ಸುಮಾರು ಏಳು ತಿಂಗಳು ಕಳೆದರೂ ಕಾಮಗಾರಿ ಮುಗಿಯುತ್ತಿಲ್ಲ. ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ’ ಎಂದು ಗುರುದತ್ತ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಜೈಸಿಂಗ್ ಹೇಳಿದರು.</p>.<p>‘ಚೆನ್ನಾಗಿಯೇ ಇದ್ದ ಮೋರಿ, ರಸ್ತೆಯೆಲ್ಲ ಕಿತ್ತು ಹಾಕಿದ್ದಾರೆ. ಕೈಗೆತ್ತಿಕೊಂಡಿರುವ ಕಾಮಗಾರಿಯನ್ನೂ ಮುಗಿಸುತ್ತಿಲ್ಲ. ದತ್ತಾತ್ರೇಯ ದೇವಸ್ಥಾನ ಮುಖ್ಯರಸ್ತೆಯಲ್ಲಿ ಈ ಕಾಮಗಾರಿ ನಡೆಯುತ್ತಿದೆ. ಇಟ್ಟಮಡು, ಗುರುದತ್ತ ಬಡಾವಣೆ, ಕೃಷ್ಣಪ್ಪ ಬಡಾವಣೆಗೆ ಇದೇ ರಸ್ತೆಯ ಮೂಲಕ ಹೋಗಬೇಕು. ಕಾಮಗಾರಿ ನಡೆಯುತ್ತಿರುವುದರಿಂದ ಸುಮಾರು 3ರಿಂದ 4 ಕಿ.ಮೀ. ಸುತ್ತಿ ಬಳಸಿ ಸಾಗಬೇಕಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮಳೆ ನೀರು ಮನೆಯೊಳಗೆ ನುಗ್ಗದಂತೆ ತಡೆಯುವ ಉದ್ದೇಶದಿಂದ ನಡೆಯುತ್ತಿರುವ ಈ ಕಾಮಗಾರಿ ಸ್ವಾಗತಾರ್ಹವೇ. ಆದರೆ, ಅನಗತ್ಯ ವಿಳಂಬ ಮಾಡುತ್ತಿರುವುದರಿಂದ ಸ್ಥಳೀಯರಿಗೆ ಅನನುಕೂಲವಾಗುತ್ತಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳೀಯರೊಬ್ಬರು ಒತ್ತಾಯಿಸಿದರು.</p>.<p class="Subhead"><strong>ಕೋವಿಡ್ ಕಾರಣದಿಂದ ವಿಳಂಬ</strong></p>.<p>‘ಕಾಮಗಾರಿ ಚುರುಕಿನಿಂದ ನಡೆಯುತ್ತಿದ್ದು ಸದ್ಯ, ಕ್ರೇಟಿಂಗ್ ಅಳವಡಿಸಲಾಗುತ್ತಿದೆ. ಕೋವಿಡ್ ಇದ್ದುದರಿಂದ ಕಾರ್ಮಿಕರು ಸಿಗದೆ ಕಾಮಗಾರಿ ವಿಳಂಬವಾಗಿದೆ’ ಎಂದು ಬಿಬಿಎಂಪಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ್ ಹೇಳಿದರು.</p>.<p>‘ಅಂದಾಜು ₹3 ಕೋಟಿ ಅನುದಾನ ಒದಗಿಸಲಾಗಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಲು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>