ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯವರ ಕೈಕಾಲು ಕಟ್ಟಿ ಕಳ್ಳತನ

Last Updated 23 ಡಿಸೆಂಬರ್ 2021, 19:45 IST
ಅಕ್ಷರ ಗಾತ್ರ

ಬೆಂಗಳೂರು: ದುಷ್ಕರ್ಮಿಗಳ ಗುಂಪೊಂದು ಮನೆಯೊಂದಕ್ಕೆ ನುಗ್ಗಿ ಅಲ್ಲಿದ್ದವರ ಕೈ ಕಾಲು ಕಟ್ಟಿಹಾಕಿ ನಗದು ಹಾಗೂ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದೆ. ಈ ಸಂಬಂಧ ಹೊಸಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಯಲ್ಲಮ್ಮ ಶರಾಬ್‌ ಮುನಿಶಾಮಯ್ಯ ಬಡಾವಣೆಯ ಕಣ್ಣೂರಹಳ್ಳಿ ರಸ್ತೆಯ ನಿವಾಸಿಯಾಗಿರುವ ವಿನೋದ್‌ ಎಂಬುವರು ಗುರುವಾರ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ವಿನೋದ್‌ ಪತ್ನಿ ಸೌಂದರ್ಯ ಹಾಗೂ ತಾಯಿ ಬಸಮ್ಮ ಎಂಬುವರ ಕೈ ಕಾಲು ಕಟ್ಟಿಹಾಕಿದ್ದರು. ಬಳಿಕ ಮನೆಯ ಬೀರುವಿನಲ್ಲಿ ಇಟ್ಟಿದ್ದ 200 ಗ್ರಾಂ ಚಿನ್ನದ ಆಭರಣ ಹಾಗೂ ₹2 ಲಕ್ಷ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಪೊಲೀಸರಿಗೆ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿಯೂ ಹೆದರಿಸಿದ್ದರು’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT