ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ‘ಸ್ಥಳೀಯರಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಸಿಗಬೇಕು ಎನ್ನುವ ಉದ್ದೇಶದಿಂದ ಈ ಆಸ್ಪತ್ರೆ ಪ್ರಾರಂಭಿಸಲಾಗಿದೆ. ಇಲ್ಲಿ ಪರಿಣತ ವೈದ್ಯರಿದ್ದು, ವರ್ಚ್ಯುಯಲ್ ಕ್ಲಿನಿಕ್ ಕೂಡ ಇದೆ. ಆಧುನಿಕತೆ, ಒತ್ತಡ, ವೃತ್ತಿಗಳ ಸಂಕೀರ್ಣತೆ, ಜೀವನಶೈಲಿ ಇತ್ಯಾದಿಗಳಿಂದ ಆಯುಸ್ಸು 90 ವರ್ಷಗಳಿಂದ 70 ವರ್ಷಕ್ಕೆ ಇಳಿದಿದೆ. ಆದ್ದರಿಂದ ಆರೋಗ್ಯ ರಕ್ಷಣೆಯ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಈ ಆಸ್ಪತ್ರೆಯಲ್ಲಿ ಎಲ್ಲ ವೈದ್ಯಕೀಯ ಸೌಲಭ್ಯಗಳೂ ಇವೆ’ ಎಂದರು.