ಆಮ್ಲಜನಕ ಘಟಕಗಳ ಕಾರ್ಯನಿರ್ವಹಣೆ, ಹಾಸಿಗೆಗಳ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ಲಭ್ಯತೆ ಸೇರಿ ಆಸ್ಪತ್ರೆಯಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲಿಸಲಾಯಿತು.ಚಿಕಿತ್ಸೆ, ಆರೈಕೆಯ ಬಗ್ಗೆ ವೈದ್ಯರು, ಶುಶ್ರೂಷಕರು ಹಾಗೂ ಸಿಬ್ಬಂದಿಯಲ್ಲಿ ಅರಿವು ಮೂಡಿಸಲಾಯಿತು.ಕೆ.ಸಿ. ಜನರಲ್, ಸರ್.ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆ ಸೇರಿ ಪ್ರಮುಖ ಆಸ್ಪತ್ರೆಗಳಲ್ಲಿ ಸಿದ್ಧತಾ ತಾಲೀಮು ಯಶಸ್ವಿಯಾಗಿ ನಡೆಯಿತು.