ಖಾಸಗಿ ಆಸ್ಪತ್ರೆಗಳು ಶೇ 50 ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕು ಎಂಬ ಸರ್ಕಾರ ಆದೇಶವನ್ನು ವಿಕ್ರಂ ಹಾಗೂ ಅಪೊಲೋ ಆಸ್ಪತ್ರೆಯ ಜಯನಗರ ಶಾಖೆ ಪಾಲಿಸದ ಹಿನ್ನೆಲೆಯಲ್ಲಿ ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಗೂಳೂರು ಶ್ರೀನಿವಾಸ್ ನೇತೃತ್ವದ ತಂಡ ಆಸ್ಪತ್ರೆಗಳಿಗೆ ಸೋಮವಾರ ಭೇಟಿ ನೀಡಿ, ಕೆಪಿಎಂಇ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಡಿ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿತ್ತು.