<p><strong>ಬೆಂಗಳೂರು</strong>: ಪ್ರವಾಸಿ ಮಿತ್ರ ಯೋಜನೆಯಡಿ ಕರ್ನಾಟಕದ ಆತಿಥ್ಯ ವಲಯದಲ್ಲಿ ಒಂದು ವರ್ಷದಲ್ಲಿ 50,000 ಯುವಕರನ್ನು ಕೌಶಲಗೊಳಿಸಿ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>.<p>ನಗರದಲ್ಲಿ ಆರಂಭಗೊಂಡ ಭಾರತೀಯ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಗಳ ಒಕ್ಕೂಟದ 55ನೇ ಸಮಾವೇಶವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರವಾಸೋದ್ಯಮ ಹಾಗೂ ಆತಿಥ್ಯ ವಲಯದಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಪ್ರವಾಸೋದ್ಯಮ ವಲಯದ ಬೆಳವಣಿಗೆಯು 12 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಗಳಿಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಆತಿಥ್ಯ ವಲಯವೇ ಈಗ ನಮ್ಮ ಆರ್ಥಿಕತೆಗೆ ಸುಮಾರು ₹25,000 ಕೋಟಿ ಕೊಡುಗೆಯನ್ನು ನೀಡುತ್ತಿದೆ ಎಂದು ತಿಳಿಸಿದರು.</p>.<p>‘ಪ್ರವಾಸೋದ್ಯಮದ ಐದು ವರ್ಷದ ಪ್ರಗತಿಯನ್ನು ಗುರಿಯಾಗಿಟ್ಟುಕೊಂಡು ಪ್ರತ್ಯೇಕ ನೀತಿಯನ್ನು ಕಳೆದ ವರ್ಷ ಜಾರಿಗೆ ತಂದಿದ್ದೇವೆ. ಎಲ್ಲರನ್ನೂ ಒಳಗೊಳ್ಳುವ, ಸುಸ್ಥಿರ ಮತ್ತು ತಂತ್ರಜ್ಞಾನ ಆಧಾರಿತ ಆತಿಥ್ಯ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುವುದು ಈ ನೀತಿಯ ಉದ್ದೇಶವಾಗಿದೆ. 2029ರ ವೇಳೆಗೆ 1.5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ₹8,000 ಕೋಟಿ ಬಂಡವಾಳ ಹೂಡಿಕೆಗಳನ್ನು ಆಕರ್ಷಿಸುವ ಗುರಿಯಿದೆ’ ಎಂದು ಹೇಳಿದರು.</p>.<p>‘ಕರ್ನಾಟಕದಲ್ಲಿ 54 ಹೊಸ ಹೋಟೆಲ್ಗಳು ಮತ್ತು ರೆಸಾರ್ಟ್ಗಳಿಗೆ ಸಹಾಯಧನವನ್ನು ನೀಡಲು ಅನುಮತಿ ನೀಡಲಾಗಿದೆ. ಇದಲ್ಲದೇ ಕರ್ನಾಟಕದ ಕರಾವಳಿ ಪ್ರವಾಸೋದ್ಯಮದ ಆಕರ್ಷಣೆ ಹೆಚ್ಚಿಸಲು ₹200 ಕೋಟಿ ವಿನಿಯೋಗಿಸುತ್ತಿದ್ದೇವೆ’ ಎಂದರು.</p>.<p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಬೆಂಗಳೂರು ನಗರ ಜಗತ್ತಿನ ಪ್ರಮುಖ ತಂತ್ರಜ್ಞಾನ, ಉದ್ಯಮ ಹಾಗೂ ನಾವೀನ್ಯ ನಗರಿಯಾಗಿ ಬೆಳೆದಿದೆ. 25 ಲಕ್ಷ ಎಂಜಿನಿಯರ್ಗಳು ಇಲ್ಲಿದ್ದಾರೆ. ಈ ನಗರದಲ್ಲಿ ಹೂಡಿಕೆಗೆ ಉದ್ಯಮಿಗಳು ಮುಂದೆ ಬಂದರೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ’ ಎಂದು ಹೇಳಿದರು.</p>.<p>ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ‘ಪ್ರವಾಸೋದ್ಯಮದ ಭಾಗವಾಗಿರುವ ಆತಿಥ್ಯ ವಲಯದ ಪ್ರಗತಿಗೆ ಪೂರಕವಾಗಿ ಸರ್ಕಾರವು ಸಹಾಯಧನ, ಪ್ರೋತ್ಸಾಹಕ ಕಾರ್ಯಕ್ರಮಗಳನ್ನು ರೂಪಿಸಿದೆ. ಇದರ ಉಪಯೋಗವನ್ನು ಉದ್ಯಮ ವಲಯ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕೇಂದ್ರ ಸಚಿವ ಗಜೇಂದ್ರಸಿಂಗ್ ಶೆಖಾವತ್, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಒಕ್ಕೂಟದ ಅಧ್ಯಕ್ಷ ಕೆ.ಶಾಮರಾಜು, ಸಮಾವೇಶದ ಆಯೋಜನಾ ಸಮಿತಿ ಅಧ್ಯಕ್ಷ ಕೆ.ರವಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರವಾಸಿ ಮಿತ್ರ ಯೋಜನೆಯಡಿ ಕರ್ನಾಟಕದ ಆತಿಥ್ಯ ವಲಯದಲ್ಲಿ ಒಂದು ವರ್ಷದಲ್ಲಿ 50,000 ಯುವಕರನ್ನು ಕೌಶಲಗೊಳಿಸಿ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>.<p>ನಗರದಲ್ಲಿ ಆರಂಭಗೊಂಡ ಭಾರತೀಯ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಗಳ ಒಕ್ಕೂಟದ 55ನೇ ಸಮಾವೇಶವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರವಾಸೋದ್ಯಮ ಹಾಗೂ ಆತಿಥ್ಯ ವಲಯದಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಪ್ರವಾಸೋದ್ಯಮ ವಲಯದ ಬೆಳವಣಿಗೆಯು 12 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಗಳಿಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಆತಿಥ್ಯ ವಲಯವೇ ಈಗ ನಮ್ಮ ಆರ್ಥಿಕತೆಗೆ ಸುಮಾರು ₹25,000 ಕೋಟಿ ಕೊಡುಗೆಯನ್ನು ನೀಡುತ್ತಿದೆ ಎಂದು ತಿಳಿಸಿದರು.</p>.<p>‘ಪ್ರವಾಸೋದ್ಯಮದ ಐದು ವರ್ಷದ ಪ್ರಗತಿಯನ್ನು ಗುರಿಯಾಗಿಟ್ಟುಕೊಂಡು ಪ್ರತ್ಯೇಕ ನೀತಿಯನ್ನು ಕಳೆದ ವರ್ಷ ಜಾರಿಗೆ ತಂದಿದ್ದೇವೆ. ಎಲ್ಲರನ್ನೂ ಒಳಗೊಳ್ಳುವ, ಸುಸ್ಥಿರ ಮತ್ತು ತಂತ್ರಜ್ಞಾನ ಆಧಾರಿತ ಆತಿಥ್ಯ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುವುದು ಈ ನೀತಿಯ ಉದ್ದೇಶವಾಗಿದೆ. 2029ರ ವೇಳೆಗೆ 1.5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ₹8,000 ಕೋಟಿ ಬಂಡವಾಳ ಹೂಡಿಕೆಗಳನ್ನು ಆಕರ್ಷಿಸುವ ಗುರಿಯಿದೆ’ ಎಂದು ಹೇಳಿದರು.</p>.<p>‘ಕರ್ನಾಟಕದಲ್ಲಿ 54 ಹೊಸ ಹೋಟೆಲ್ಗಳು ಮತ್ತು ರೆಸಾರ್ಟ್ಗಳಿಗೆ ಸಹಾಯಧನವನ್ನು ನೀಡಲು ಅನುಮತಿ ನೀಡಲಾಗಿದೆ. ಇದಲ್ಲದೇ ಕರ್ನಾಟಕದ ಕರಾವಳಿ ಪ್ರವಾಸೋದ್ಯಮದ ಆಕರ್ಷಣೆ ಹೆಚ್ಚಿಸಲು ₹200 ಕೋಟಿ ವಿನಿಯೋಗಿಸುತ್ತಿದ್ದೇವೆ’ ಎಂದರು.</p>.<p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಬೆಂಗಳೂರು ನಗರ ಜಗತ್ತಿನ ಪ್ರಮುಖ ತಂತ್ರಜ್ಞಾನ, ಉದ್ಯಮ ಹಾಗೂ ನಾವೀನ್ಯ ನಗರಿಯಾಗಿ ಬೆಳೆದಿದೆ. 25 ಲಕ್ಷ ಎಂಜಿನಿಯರ್ಗಳು ಇಲ್ಲಿದ್ದಾರೆ. ಈ ನಗರದಲ್ಲಿ ಹೂಡಿಕೆಗೆ ಉದ್ಯಮಿಗಳು ಮುಂದೆ ಬಂದರೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ’ ಎಂದು ಹೇಳಿದರು.</p>.<p>ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ‘ಪ್ರವಾಸೋದ್ಯಮದ ಭಾಗವಾಗಿರುವ ಆತಿಥ್ಯ ವಲಯದ ಪ್ರಗತಿಗೆ ಪೂರಕವಾಗಿ ಸರ್ಕಾರವು ಸಹಾಯಧನ, ಪ್ರೋತ್ಸಾಹಕ ಕಾರ್ಯಕ್ರಮಗಳನ್ನು ರೂಪಿಸಿದೆ. ಇದರ ಉಪಯೋಗವನ್ನು ಉದ್ಯಮ ವಲಯ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕೇಂದ್ರ ಸಚಿವ ಗಜೇಂದ್ರಸಿಂಗ್ ಶೆಖಾವತ್, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಒಕ್ಕೂಟದ ಅಧ್ಯಕ್ಷ ಕೆ.ಶಾಮರಾಜು, ಸಮಾವೇಶದ ಆಯೋಜನಾ ಸಮಿತಿ ಅಧ್ಯಕ್ಷ ಕೆ.ರವಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>