‘ಹಾಸಿಗೆ ಲಭ್ಯವಿಲ್ಲ ಎಂಬುದರ ಬಗ್ಗೆ ಹೆಚ್ಚಿನ ದೂರುಗಳು ದಾಖಲಾಗುತ್ತಿವೆ. ಹೀಗಾಗಿ, ನಿಗದಿತ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯವಾಗದಿದ್ದರೆ ಅಹವಾಲು ಸಲ್ಲಿಸಲು ನಿರ್ದಿಷ್ಟ ದೂರವಾಣಿ ಸಂಖ್ಯೆ ನೀಡಬೇಕು. ಸರ್ಕಾರದ ನಿರ್ದೇಶನ ಪಾಲಿಸದಿದ್ದರೆ ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ ಪ್ರಕಾರ ದಂಡ ಸಹಿತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಬೇಕು’ ಎಂದು ಪೀಠ ಹೇಳಿತು.