<p><strong>ಬೆಂಗಳೂರು:</strong> ಜ್ಞಾನಭಾರತಿ ಕ್ಯಾಂಪಸ್ನಲ್ಲಿರುವ ಹಾಸ್ಟೆಲ್ ಕೊಠಡಿಗಳನ್ನು ‘ಕೋವಿಡ್ ಆರೈಕೆ ಕೇಂದ್ರ’ಗಳಾಗಿ ಮಾಡುವ ಉದ್ದೇಶದಿಂದ ತಮ್ಮನ್ನು ತೆರವುಗೊಳಿಸಿದ ಕ್ರಮವನ್ನು ವಿರೋಧಿಸಿ ಬೆಂಗಳೂರು ವಿಶ್ವವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕ್ಯಾಂಪಸ್ನಲ್ಲಿರುವ ಕೆಲವು ಹಾಸ್ಟೆಲ್ ಕಟ್ಟಡಗಳನ್ನು ಕೋವಿಡ್ ಆರೈಕೆ ಕೇಂದ್ರಗಳಾಗಿ ಪರಿವರ್ತಿಸಲು ವಶಕ್ಕೆ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಆದೇಶ ಹೊರಡಿಸಿದ್ದರು. ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿಗಳಿಗೆ ಈ ಬಗ್ಗೆ ಸೋಮವಾರ ಸಂಜೆ ಮಾಹಿತಿ ನೀಡಿದ್ದ ವಿಶ್ವವಿದ್ಯಾಲಯದ ಅಧಿಕಾರಿಗಳು, ಹಾಸ್ಟೆಲ್ಗೆ ಬಂದು ತಮ್ಮ ವಸ್ತುಗಳನ್ನು ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು. ಮಂಗಳವಾರ ಬೆಳಿಗ್ಗೆ ಕ್ಯಾಂಪಸ್ನಲ್ಲಿ ಗುಂಪುಗೂಡಿದ ವಿದ್ಯಾರ್ಥಿಗಳು, ಕೊಠಡಿ ತೆರವುಗೊಳಿಸಲು ವಿರೋಧ ವ್ಯಕ್ತಪಡಿಸಿದರು.</p>.<p>ಮಾರ್ಚ್ ನಂತರ ತರಗತಿಗಳು ನಡೆಯದೇ ಇದ್ದುದರಿಂದ ಅನೇಕ ವಿದ್ಯಾರ್ಥಿಗಳು ತವರಿಗೆ ಮರಳಿದ್ದು, ಅಧಿಕಾರಿಗಳ ಸೂಚನೆಯಂತೆ ಮಂಗಳವಾರ ಬೆಳಿಗ್ಗೆ ಹಾಸ್ಟೆಲ್ಗೆ ಬಂದಿದ್ದರು. ಆದರೆ, ಉತ್ತರ ಕರ್ನಾಟಕ ಜಿಲ್ಲೆಯ ಹಲವು ವಿದ್ಯಾರ್ಥಿಗಳಿಗೆ ಬರಲು ಸಾಧ್ಯವಾಗಿಲ್ಲ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳು, ‘ಸ್ನೇಹಿತೆಯೊಬ್ಬಳು ಮಾಹಿತಿ ನೀಡಿದ ಕಾರಣ ಮಂಡ್ಯ ಜಿಲ್ಲೆಯ ಹಳ್ಳಿಯಲ್ಲಿರುವ ನನಗೆ ಬರಲು ಸಾಧ್ಯವಾಯಿತು. ಕೊನೆಕ್ಷಣದಲ್ಲಿ ವಿಷಯ ಗೊತ್ತಾಗಿರುವುದರಿಂದ ಸಾಮಾನುಗಳನ್ನೆಲ್ಲ ಸಾಗಿಸಲು ವ್ಯವಸ್ಥೆ ಮಾಡುವುದು ಕಷ್ಟ’ ಎಂದಳು.</p>.<p>ವಿದ್ಯಾರ್ಥಿಗಳ ಮನವೊಲಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳು, ಸಾಮಾನುಗಳನ್ನು ತೆಗೆದಿಡಲು ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದರು. ‘ಹೆಚ್ಚು ಬೆಲೆಯ ವಸ್ತುಗಳು ಮತ್ತು ಪ್ರಮಾಣಪತ್ರಗಳನ್ನು ಮಾತ್ರ ತೆಗೆದುಕೊಳ್ಳಿ. ಉಳಿದ ವಸ್ತುಗಳನ್ನು<br />ಸುರಕ್ಷಿತವಾಗಿಡಲು ವ್ಯವಸ್ಥೆ ಮಾಡುತ್ತೇವೆ’ ಎಂದು ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.</p>.<p>‘ಕೋವಿಡ್ ಆರೈಕೆ ಕೇಂದ್ರವಾಗಿ ಬಳಸಲು 750 ಬೆಡ್ಗಳಿರುವ ಎರಡು ಹಾಸ್ಟೆಲ್ ಕಟ್ಟಡಗಳನ್ನು ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಈ ಪೈಕಿ, ಒಂದು ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯರಿದ್ದು ಅದನ್ನು ಖಾಲಿ ಮಾಡಿಸಬೇಕಿದೆ. ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿದ್ದ ಮತ್ತೊಂದು ಹಾಸ್ಟೆಲ್ ಖಾಲಿ ಇದೆ’ ಎಂದೂ ವೇಣುಗೋಪಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜ್ಞಾನಭಾರತಿ ಕ್ಯಾಂಪಸ್ನಲ್ಲಿರುವ ಹಾಸ್ಟೆಲ್ ಕೊಠಡಿಗಳನ್ನು ‘ಕೋವಿಡ್ ಆರೈಕೆ ಕೇಂದ್ರ’ಗಳಾಗಿ ಮಾಡುವ ಉದ್ದೇಶದಿಂದ ತಮ್ಮನ್ನು ತೆರವುಗೊಳಿಸಿದ ಕ್ರಮವನ್ನು ವಿರೋಧಿಸಿ ಬೆಂಗಳೂರು ವಿಶ್ವವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕ್ಯಾಂಪಸ್ನಲ್ಲಿರುವ ಕೆಲವು ಹಾಸ್ಟೆಲ್ ಕಟ್ಟಡಗಳನ್ನು ಕೋವಿಡ್ ಆರೈಕೆ ಕೇಂದ್ರಗಳಾಗಿ ಪರಿವರ್ತಿಸಲು ವಶಕ್ಕೆ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಆದೇಶ ಹೊರಡಿಸಿದ್ದರು. ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿಗಳಿಗೆ ಈ ಬಗ್ಗೆ ಸೋಮವಾರ ಸಂಜೆ ಮಾಹಿತಿ ನೀಡಿದ್ದ ವಿಶ್ವವಿದ್ಯಾಲಯದ ಅಧಿಕಾರಿಗಳು, ಹಾಸ್ಟೆಲ್ಗೆ ಬಂದು ತಮ್ಮ ವಸ್ತುಗಳನ್ನು ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು. ಮಂಗಳವಾರ ಬೆಳಿಗ್ಗೆ ಕ್ಯಾಂಪಸ್ನಲ್ಲಿ ಗುಂಪುಗೂಡಿದ ವಿದ್ಯಾರ್ಥಿಗಳು, ಕೊಠಡಿ ತೆರವುಗೊಳಿಸಲು ವಿರೋಧ ವ್ಯಕ್ತಪಡಿಸಿದರು.</p>.<p>ಮಾರ್ಚ್ ನಂತರ ತರಗತಿಗಳು ನಡೆಯದೇ ಇದ್ದುದರಿಂದ ಅನೇಕ ವಿದ್ಯಾರ್ಥಿಗಳು ತವರಿಗೆ ಮರಳಿದ್ದು, ಅಧಿಕಾರಿಗಳ ಸೂಚನೆಯಂತೆ ಮಂಗಳವಾರ ಬೆಳಿಗ್ಗೆ ಹಾಸ್ಟೆಲ್ಗೆ ಬಂದಿದ್ದರು. ಆದರೆ, ಉತ್ತರ ಕರ್ನಾಟಕ ಜಿಲ್ಲೆಯ ಹಲವು ವಿದ್ಯಾರ್ಥಿಗಳಿಗೆ ಬರಲು ಸಾಧ್ಯವಾಗಿಲ್ಲ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳು, ‘ಸ್ನೇಹಿತೆಯೊಬ್ಬಳು ಮಾಹಿತಿ ನೀಡಿದ ಕಾರಣ ಮಂಡ್ಯ ಜಿಲ್ಲೆಯ ಹಳ್ಳಿಯಲ್ಲಿರುವ ನನಗೆ ಬರಲು ಸಾಧ್ಯವಾಯಿತು. ಕೊನೆಕ್ಷಣದಲ್ಲಿ ವಿಷಯ ಗೊತ್ತಾಗಿರುವುದರಿಂದ ಸಾಮಾನುಗಳನ್ನೆಲ್ಲ ಸಾಗಿಸಲು ವ್ಯವಸ್ಥೆ ಮಾಡುವುದು ಕಷ್ಟ’ ಎಂದಳು.</p>.<p>ವಿದ್ಯಾರ್ಥಿಗಳ ಮನವೊಲಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳು, ಸಾಮಾನುಗಳನ್ನು ತೆಗೆದಿಡಲು ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದರು. ‘ಹೆಚ್ಚು ಬೆಲೆಯ ವಸ್ತುಗಳು ಮತ್ತು ಪ್ರಮಾಣಪತ್ರಗಳನ್ನು ಮಾತ್ರ ತೆಗೆದುಕೊಳ್ಳಿ. ಉಳಿದ ವಸ್ತುಗಳನ್ನು<br />ಸುರಕ್ಷಿತವಾಗಿಡಲು ವ್ಯವಸ್ಥೆ ಮಾಡುತ್ತೇವೆ’ ಎಂದು ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.</p>.<p>‘ಕೋವಿಡ್ ಆರೈಕೆ ಕೇಂದ್ರವಾಗಿ ಬಳಸಲು 750 ಬೆಡ್ಗಳಿರುವ ಎರಡು ಹಾಸ್ಟೆಲ್ ಕಟ್ಟಡಗಳನ್ನು ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಈ ಪೈಕಿ, ಒಂದು ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯರಿದ್ದು ಅದನ್ನು ಖಾಲಿ ಮಾಡಿಸಬೇಕಿದೆ. ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿದ್ದ ಮತ್ತೊಂದು ಹಾಸ್ಟೆಲ್ ಖಾಲಿ ಇದೆ’ ಎಂದೂ ವೇಣುಗೋಪಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>