‘ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದೆ. ಈ ವೇಳೆ ಅಗತ್ಯ ಸೇವೆಗಳಿಗೆ ಸರ್ಕಾರವೇ ಅನುಮತಿ ನೀಡಿದೆ. ಹೋಟೆಲ್ಗಳನ್ನೂ ಅಗತ್ಯ ಸೇವೆಯಡಿ ಪರಿಗಣಿಸಿ, ಪಾರ್ಸೆಲ್ಗೆ ಮಾತ್ರ ಅವಕಾಶ ನೀಡಿದೆ. ಆದರೂ, ಶನಿವಾರ ಹಾಗೂ ಭಾನುವಾರ ನಗರದ ವಿವಿಧೆಡೆ ಪೊಲೀಸರು ಹೋಟೆಲ್ಗಳನ್ನು ಬಲವಂತವಾಗಿ ಮುಚ್ಚಿಸಿ ಅಡ್ಡಿಪಡಿಸಿದ್ದಾರೆ’ ಎಂದುಬೃಹತ್ ಬೆಂಗಳೂರು ಹೋಟೆಲ್ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದರು.