‘ದೂರುದಾರ ದಿನೇಶ್ ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಮನೆಯತ್ತ ಹೊರಟಿದ್ದರು. ಅವರನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು, ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದರು. ಕಿಟಕಿ ಗಾಜು ಒಡೆದು ದಿನೇಶ್ ಅವರ ಬಲಗೈಗೆ ಚಾಕುವಿನಿಂದ ಇರಿದಿದ್ದರು. ನಂತರ, ₹50 ಸಾವಿರ ನಗದು ಹಾಗೂ ಎರಡು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ತಿಳಿಸಿದರು.