ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಿನ ಗಾಜು ಒಡೆದು ಚಾಕುವಿನಿಂದ ಇರಿದು ಸುಲಿಗೆ

Last Updated 5 ಜುಲೈ 2020, 9:14 IST
ಅಕ್ಷರ ಗಾತ್ರ

ಬೆಂಗಳೂರು: ಭಾರತಿನಗರ ಠಾಣೆ ವ್ಯಾಪ್ತಿಯಲ್ಲಿ ಹೋಟೆಲ್ ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

‘ಶುಕ್ರವಾರ ರಾತ್ರಿ 10.30ರ ಸುಮಾರಿಗೆ ನಡೆದಿರುವ ಘಟನೆ ಸಂಬಂಧ ಉದ್ಯಮಿ ದಿನೇಶ್ ವಾಸುದೇವ ಕಲ್ರಾ ಎಂಬುವರು ದೂರು ನೀಡಿದ್ದಾರೆ. ನಾಲ್ವರು ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರ ದಿನೇಶ್ ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಮನೆಯತ್ತ ಹೊರಟಿದ್ದರು. ಅವರನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು, ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದರು. ಕಿಟಕಿ ಗಾಜು ಒಡೆದು ದಿನೇಶ್ ಅವರ ಬಲಗೈಗೆ ಚಾಕುವಿನಿಂದ ಇರಿದಿದ್ದರು. ನಂತರ, ₹50 ಸಾವಿರ ನಗದು ಹಾಗೂ ಎರಡು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT