<p><strong>ಬೆಂಗಳೂರು</strong>: ವಾಣಿಜ್ಯ ಬಳಕೆಯ ಅಡುಗೆ ಅನಿಲದ ಸಿಲಿಂಡರ್ ದರ ಹೆಚ್ಚಾಗಿರುವುದರಿಂದ ಹೋಟೆಲ್ಗಳಲ್ಲಿ ತಿಂಡಿ– ತಿನಿಸುಗಳ ದರವೂ ಹೆಚ್ಚಾಗುವ ಸಾಧ್ಯತೆ ಇದೆ. ದರ ಹೆಚ್ಚಳದ ಬಗ್ಗೆ ಮುಂದಿನ ವಾರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘ ತಿಳಿಸಿದೆ. </p>.<p>‘ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗಿ, ದರ ಹೆಚ್ಚಳವಾಗಿದೆ. ಅಡುಗೆ ಅನಿಲ ಸಂಗ್ರಹ ಇದ್ದರೂ, ಕೇಂದ್ರ ಸರ್ಕಾರ ದಿಢೀರನೇ ದರ ಹೆಚ್ಚಿಸಿರುವುದು ಸರಿಯಲ್ಲ. ಮಾರ್ಚ್ 1ರಂದು ವಾಣಿಜ್ಯ ಬಳಕೆ ಅಡುಗೆ ಅನಿಲದ ದರವನ್ನು ₹30, ಮಾರ್ಚ್ 7ರಂದು ₹115 ಹೆಚ್ಚಿಸಲಾಗಿದೆ. ಅಲ್ಲದೆ ಹಿಂದೆ ಸಬ್ಸಿಡಿಯಾಗಿ ನೀಡುತ್ತಿದ್ದ ₹150 ಸ್ಥಗಿತಗೊಳಿಸಿರುವುದರಿಂದ ಒಟ್ಟಾರೆ ₹295 ದರ ಹೆಚ್ಚಳವಾಗಿದೆ’ ಎಂದು ಸಂಘದ ಗೌರವ ಅಧ್ಯಕ್ಷ ಪಿ.ಸಿ.ರಾವ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (ಬಿಎಸ್ಡಬ್ಲ್ಯು) ಕೂಡ ಒಂದು ಕೆ.ಜಿ ತ್ಯಾಜ್ಯಕ್ಕೆ ₹12 ನೀಡುವಂತೆ ಆದೇಶ ಹೊರಡಿಸಿದೆ. ಇದರ ಜೊತೆಗೆ ಒಂದು ಯೂನಿಟ್ ವಿದ್ಯುತ್ಗೆ ₹1 ಹೆಚ್ಚಿಸಲಾಗಿದೆ. ಅಡುಗೆ ಎಣ್ಣೆಯ ದರವೂ ಶೇ 15ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಇದು ಹೋಟೆಲ್ ಉದ್ಯಮಕ್ಕೆ ಹೊಡೆತ ನೀಡಲಿದೆ. ಆದ್ದರಿಂದ ತಿಂಡಿ–ತಿನಿಸುಗಳ ಬೆಲೆ ಏರಿಸುವುದು ಅನಿವಾರ್ಯವಾಗಲಿದೆ. ವಾಣಿಜ್ಯ ಬಳಕೆ ಅಡುಗೆ ಅನಿಲದ ದರವನ್ನು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಹಾಗೂ ತ್ಯಾಜ್ಯ ಸಂಗ್ರಹ ಶುಲ್ಕ ಹಾಗೂ ವಿದ್ಯುತ್ ದರ ಇಳಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದು’ ಎಂದು ಮಾಹಿತಿ ನೀಡಿದರು. </p>.<p>‘ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಇದಕ್ಕೆ ಸ್ಪಂದಿಸದಿದ್ದರೆ ಒಂದು ವಾರದ ನಂತರ ಸಭೆ ನಡೆಸಿ, ತಿಂಡಿ–ತಿನಿಸುಗಳ ಬೆಲೆಯನ್ನು ಎಷ್ಟು ಹೆಚ್ಚಳ ಮಾಡಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಾಣಿಜ್ಯ ಬಳಕೆಯ ಅಡುಗೆ ಅನಿಲದ ಸಿಲಿಂಡರ್ ದರ ಹೆಚ್ಚಾಗಿರುವುದರಿಂದ ಹೋಟೆಲ್ಗಳಲ್ಲಿ ತಿಂಡಿ– ತಿನಿಸುಗಳ ದರವೂ ಹೆಚ್ಚಾಗುವ ಸಾಧ್ಯತೆ ಇದೆ. ದರ ಹೆಚ್ಚಳದ ಬಗ್ಗೆ ಮುಂದಿನ ವಾರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘ ತಿಳಿಸಿದೆ. </p>.<p>‘ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗಿ, ದರ ಹೆಚ್ಚಳವಾಗಿದೆ. ಅಡುಗೆ ಅನಿಲ ಸಂಗ್ರಹ ಇದ್ದರೂ, ಕೇಂದ್ರ ಸರ್ಕಾರ ದಿಢೀರನೇ ದರ ಹೆಚ್ಚಿಸಿರುವುದು ಸರಿಯಲ್ಲ. ಮಾರ್ಚ್ 1ರಂದು ವಾಣಿಜ್ಯ ಬಳಕೆ ಅಡುಗೆ ಅನಿಲದ ದರವನ್ನು ₹30, ಮಾರ್ಚ್ 7ರಂದು ₹115 ಹೆಚ್ಚಿಸಲಾಗಿದೆ. ಅಲ್ಲದೆ ಹಿಂದೆ ಸಬ್ಸಿಡಿಯಾಗಿ ನೀಡುತ್ತಿದ್ದ ₹150 ಸ್ಥಗಿತಗೊಳಿಸಿರುವುದರಿಂದ ಒಟ್ಟಾರೆ ₹295 ದರ ಹೆಚ್ಚಳವಾಗಿದೆ’ ಎಂದು ಸಂಘದ ಗೌರವ ಅಧ್ಯಕ್ಷ ಪಿ.ಸಿ.ರಾವ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (ಬಿಎಸ್ಡಬ್ಲ್ಯು) ಕೂಡ ಒಂದು ಕೆ.ಜಿ ತ್ಯಾಜ್ಯಕ್ಕೆ ₹12 ನೀಡುವಂತೆ ಆದೇಶ ಹೊರಡಿಸಿದೆ. ಇದರ ಜೊತೆಗೆ ಒಂದು ಯೂನಿಟ್ ವಿದ್ಯುತ್ಗೆ ₹1 ಹೆಚ್ಚಿಸಲಾಗಿದೆ. ಅಡುಗೆ ಎಣ್ಣೆಯ ದರವೂ ಶೇ 15ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಇದು ಹೋಟೆಲ್ ಉದ್ಯಮಕ್ಕೆ ಹೊಡೆತ ನೀಡಲಿದೆ. ಆದ್ದರಿಂದ ತಿಂಡಿ–ತಿನಿಸುಗಳ ಬೆಲೆ ಏರಿಸುವುದು ಅನಿವಾರ್ಯವಾಗಲಿದೆ. ವಾಣಿಜ್ಯ ಬಳಕೆ ಅಡುಗೆ ಅನಿಲದ ದರವನ್ನು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಹಾಗೂ ತ್ಯಾಜ್ಯ ಸಂಗ್ರಹ ಶುಲ್ಕ ಹಾಗೂ ವಿದ್ಯುತ್ ದರ ಇಳಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದು’ ಎಂದು ಮಾಹಿತಿ ನೀಡಿದರು. </p>.<p>‘ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಇದಕ್ಕೆ ಸ್ಪಂದಿಸದಿದ್ದರೆ ಒಂದು ವಾರದ ನಂತರ ಸಭೆ ನಡೆಸಿ, ತಿಂಡಿ–ತಿನಿಸುಗಳ ಬೆಲೆಯನ್ನು ಎಷ್ಟು ಹೆಚ್ಚಳ ಮಾಡಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>