<p><strong>ಬೆಂಗಳೂರು</strong>: ನಗರದ ಹೋಟೆಲ್ಗಳು ರಾತ್ರಿ 10 ಗಂಟೆ ಬಳಿಕ ವಹಿವಾಟು ನಡೆಸಬಾರದು ಎಂದು ಬಿಬಿಎಂಪಿ ಸೂಚನೆ ನೀಡಿದೆ.</p>.<p>ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳ ಜೊತೆ ವರ್ಚುವಲ್ ರೂಪದಲ್ಲಿ ಮಂಗಳವಾರ ಸಭೆ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ‘ನಗರದಲ್ಲಿ ಕೋವಿಡ್ ಸೋಂಕು ನಿಯಂತ್ರಣದಲ್ಲಿರಬೇಕಾದರೆ ಎಲ್ಲ ಹೋಟೆಲ್ಗಳಲ್ಲೂ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ನಗರದಲ್ಲಿ ರಾತ್ರಿ 10 ರಿಂದ ಮುಂಜಾನೆ 5 ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ. ಆದರೂ ಬಹುತೇಕ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ರಾತ್ರಿ 10 ಬಳಿಕವೂ ವಹಿವಾಟು ನಡೆಸುತ್ತಿವೆ. ಇದರಿಂದಾಗಿ ನಾಗರಿಕರು ಹೊರಗಡೆ ಅಡ್ಡಾಡುತ್ತಿದ್ದಾರೆ. ಇನ್ನು ರಾತ್ರಿ 10ರ ಒಳಗೆ ಹೋಟೆಲ್ಗಳನ್ನು ಮುಚ್ಚಬೇಕು’ ಎಂದು ಕಟ್ಟುನಿಟ್ಟಾಗಿ ತಿಳಿಸಿದರು.</p>.<p>‘ಅಡುಗೆ ಸಿಬ್ಬಂದಿ, ಊಟ ಬಡಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗ್ರಾಹಕರು ಊಟ/ ತಿಂಡಿ ತಿನಿಸು ಸೇವಿಸುವ ಸಂದರ್ಭದ ಹೊರತಾಗಿ ಇತರ ವೇಳೆ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಬೇಕು. ಗ್ರಾಹಕರು ಅಂತರ ಕಾಯ್ದುಕೊಳ್ಳುವುದಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ನಿಯಮ ಪಾಲನೆ ಕುರಿತು ಅವರಲ್ಲಿ ಅರಿವು ಮೂಡಿಸಬೇಕು’ ಎಂದರು.</p>.<p>‘ಹೋಟೆಲ್ನ ಸಿಬ್ಬಂದಿಯನ್ನೂ ಆಗಿಂದಾಗ್ಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಸೋಂಕು ಪತ್ತೆಯಾದಲ್ಲಿ, ಅಂತಹ ಸಿಬ್ಬಂದಿಯ ಪ್ರತ್ಯೇಕ ವಾಸಕ್ಕೆ ವ್ಯವಸ್ಥೆ ಸಜ್ಜಾಗಿರಬೇಕು’ ಎಂದು ತಿಳಿಸಿದರು.</p>.<p>‘ರೆಸ್ಟೋರಂಟ್ಗಳಲ್ಲಿ, ಪಾರ್ಟಿ ಹಾಲ್ಗಳಲ್ಲಿ ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಯಾವುದಾದರೂ ಸಮಾರಂಭ ನಡೆಯುವಾಗ ನಿಯಮಗಳ ಉಲ್ಲಂಘನೆ ಆಗದಂತೆ ಸಂಬಂಧಪಟ್ಟ ಸಿಬ್ಬಂದಿ ಎಚ್ಚರ ವಹಿಸಬೇಕು’ ಎಂದರು.</p>.<p>-0-</p>.<p class="Briefhead">ಹೋಟೆಲ್ ಕಾರ್ಮಿಕಗೆ ಕೋವಿಡ್</p>.<p>ಜ್ಞಾನಭಾರತಿ ವಾರ್ಡ್ನ ಎನ್.ಜಿ.ಎಫ್ ಬಡಾವಣೆಯ ಹೋಟೆಲ್ನ ಕಾರ್ಮಿಕರೊಬ್ಬರಲ್ಲಿ ಕೋವಿಡ್ ದೃಢಪಟ್ಟಿದೆ. ಹಾಗಾಗಿ ಹೋಟೆಲ್ನ ಎಲ್ಲ ಕಾರ್ಮಿಕರನ್ನೂ ಬಿಬಿಎಂಪಿ ಕೋವಿಡ್ ಪರೀಕ್ಷೆಗೆ ಒಳಪಡಿಸಿದೆ. ಹೋಟೆಲ್ ಕಟ್ಟಡಕ್ಕೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಗಿದ್ದು, ಹೋಟೆಲನ್ನು ಮುಚ್ಚಲಾಗಿದೆ.</p>.<p>‘ನಾಗರಭಾವಿ ಮುಖ್ಯರಸ್ತೆ ಬಳಿಯಲ್ಲಿರುವ ನಮ್ಮೂರ ತಿಂಡಿ ಹೋಟೆಲ್ ಕಾರ್ಮಿಕರನ್ನು ಕೋವಿಡ್- ಪರೀಕ್ಷೆಗೆ ಒಳಪಡಿಸಿದ್ದೆವು. ಈ ವೇಳೆ ಒಬ್ಬ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ಪರೀಕ್ಷೆಗೆ ಒಳಪಟ್ಟ ಇತರ ಕಾರ್ಮಿಕರನ್ನು ಫಲಿತಾಂಶ ಬರುವವರೆಗೆ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತದೆ’ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p>ರಾಜರಾಜೇಶ್ವರಿನಗರ ವಲಯದ ಎಲ್ಲ ಹೋಟೆಲ್ಗಳ ಕಾರ್ಮಿಕರೆಲ್ಲರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಮತ್ತು ಅವರೆಲ್ಲರಿಗೂ ಕೋವಿಡ್ ಲಸಿಕೆ ಹಾಕಿಸುವಂತೆ ವಲಯ ಆಯುಕ್ತ ರೆಡ್ಡಿ ಶಂಕರಬಾಬು ಅವರು ಹೋಟೆಲ್ಗಳ ಮಾಲೀಕರಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಹೋಟೆಲ್ಗಳು ರಾತ್ರಿ 10 ಗಂಟೆ ಬಳಿಕ ವಹಿವಾಟು ನಡೆಸಬಾರದು ಎಂದು ಬಿಬಿಎಂಪಿ ಸೂಚನೆ ನೀಡಿದೆ.</p>.<p>ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳ ಜೊತೆ ವರ್ಚುವಲ್ ರೂಪದಲ್ಲಿ ಮಂಗಳವಾರ ಸಭೆ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ‘ನಗರದಲ್ಲಿ ಕೋವಿಡ್ ಸೋಂಕು ನಿಯಂತ್ರಣದಲ್ಲಿರಬೇಕಾದರೆ ಎಲ್ಲ ಹೋಟೆಲ್ಗಳಲ್ಲೂ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ನಗರದಲ್ಲಿ ರಾತ್ರಿ 10 ರಿಂದ ಮುಂಜಾನೆ 5 ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ. ಆದರೂ ಬಹುತೇಕ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ರಾತ್ರಿ 10 ಬಳಿಕವೂ ವಹಿವಾಟು ನಡೆಸುತ್ತಿವೆ. ಇದರಿಂದಾಗಿ ನಾಗರಿಕರು ಹೊರಗಡೆ ಅಡ್ಡಾಡುತ್ತಿದ್ದಾರೆ. ಇನ್ನು ರಾತ್ರಿ 10ರ ಒಳಗೆ ಹೋಟೆಲ್ಗಳನ್ನು ಮುಚ್ಚಬೇಕು’ ಎಂದು ಕಟ್ಟುನಿಟ್ಟಾಗಿ ತಿಳಿಸಿದರು.</p>.<p>‘ಅಡುಗೆ ಸಿಬ್ಬಂದಿ, ಊಟ ಬಡಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗ್ರಾಹಕರು ಊಟ/ ತಿಂಡಿ ತಿನಿಸು ಸೇವಿಸುವ ಸಂದರ್ಭದ ಹೊರತಾಗಿ ಇತರ ವೇಳೆ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಬೇಕು. ಗ್ರಾಹಕರು ಅಂತರ ಕಾಯ್ದುಕೊಳ್ಳುವುದಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ನಿಯಮ ಪಾಲನೆ ಕುರಿತು ಅವರಲ್ಲಿ ಅರಿವು ಮೂಡಿಸಬೇಕು’ ಎಂದರು.</p>.<p>‘ಹೋಟೆಲ್ನ ಸಿಬ್ಬಂದಿಯನ್ನೂ ಆಗಿಂದಾಗ್ಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಸೋಂಕು ಪತ್ತೆಯಾದಲ್ಲಿ, ಅಂತಹ ಸಿಬ್ಬಂದಿಯ ಪ್ರತ್ಯೇಕ ವಾಸಕ್ಕೆ ವ್ಯವಸ್ಥೆ ಸಜ್ಜಾಗಿರಬೇಕು’ ಎಂದು ತಿಳಿಸಿದರು.</p>.<p>‘ರೆಸ್ಟೋರಂಟ್ಗಳಲ್ಲಿ, ಪಾರ್ಟಿ ಹಾಲ್ಗಳಲ್ಲಿ ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಯಾವುದಾದರೂ ಸಮಾರಂಭ ನಡೆಯುವಾಗ ನಿಯಮಗಳ ಉಲ್ಲಂಘನೆ ಆಗದಂತೆ ಸಂಬಂಧಪಟ್ಟ ಸಿಬ್ಬಂದಿ ಎಚ್ಚರ ವಹಿಸಬೇಕು’ ಎಂದರು.</p>.<p>-0-</p>.<p class="Briefhead">ಹೋಟೆಲ್ ಕಾರ್ಮಿಕಗೆ ಕೋವಿಡ್</p>.<p>ಜ್ಞಾನಭಾರತಿ ವಾರ್ಡ್ನ ಎನ್.ಜಿ.ಎಫ್ ಬಡಾವಣೆಯ ಹೋಟೆಲ್ನ ಕಾರ್ಮಿಕರೊಬ್ಬರಲ್ಲಿ ಕೋವಿಡ್ ದೃಢಪಟ್ಟಿದೆ. ಹಾಗಾಗಿ ಹೋಟೆಲ್ನ ಎಲ್ಲ ಕಾರ್ಮಿಕರನ್ನೂ ಬಿಬಿಎಂಪಿ ಕೋವಿಡ್ ಪರೀಕ್ಷೆಗೆ ಒಳಪಡಿಸಿದೆ. ಹೋಟೆಲ್ ಕಟ್ಟಡಕ್ಕೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಗಿದ್ದು, ಹೋಟೆಲನ್ನು ಮುಚ್ಚಲಾಗಿದೆ.</p>.<p>‘ನಾಗರಭಾವಿ ಮುಖ್ಯರಸ್ತೆ ಬಳಿಯಲ್ಲಿರುವ ನಮ್ಮೂರ ತಿಂಡಿ ಹೋಟೆಲ್ ಕಾರ್ಮಿಕರನ್ನು ಕೋವಿಡ್- ಪರೀಕ್ಷೆಗೆ ಒಳಪಡಿಸಿದ್ದೆವು. ಈ ವೇಳೆ ಒಬ್ಬ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ಪರೀಕ್ಷೆಗೆ ಒಳಪಟ್ಟ ಇತರ ಕಾರ್ಮಿಕರನ್ನು ಫಲಿತಾಂಶ ಬರುವವರೆಗೆ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತದೆ’ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p>ರಾಜರಾಜೇಶ್ವರಿನಗರ ವಲಯದ ಎಲ್ಲ ಹೋಟೆಲ್ಗಳ ಕಾರ್ಮಿಕರೆಲ್ಲರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಮತ್ತು ಅವರೆಲ್ಲರಿಗೂ ಕೋವಿಡ್ ಲಸಿಕೆ ಹಾಕಿಸುವಂತೆ ವಲಯ ಆಯುಕ್ತ ರೆಡ್ಡಿ ಶಂಕರಬಾಬು ಅವರು ಹೋಟೆಲ್ಗಳ ಮಾಲೀಕರಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>