<p><strong>ಬೆಂಗಳೂರು: </strong>‘ಕೋವಿಡ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡುವುದೇ ಪರಿಹಾರ ಅಲ್ಲ. ಅಗತ್ಯ ಮುಂಜಾಗ್ರತೆಗಳನ್ನು ಸರ್ಕಾರ ತೆಗೆದುಕೊಂಡರೆ, ಸೋಂಕು ಹರಡುವಿಕೆ ತಪ್ಪಿಸಬಹುದು’ ಎಂದು ಬೃಹತ್ ಬೆಂಗಳೂರು ಹೋಟೆಲುಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.</p>.<p>‘ಸರ್ಕಾರ ಹೋಟೆಲ್ ಮಾಲೀಕರೊಂದಿಗೆ ಚರ್ಚಿಸದೆ, ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಹಾಗೂ ಲಾಕ್ಡೌನ್ನಂತಹ ತರಾತುರಿ ನಿರ್ಣಯಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ. ವ್ಯಾಪಾರಿ ಸಮೂಹಕ್ಕೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದ್ದಾರೆ.</p>.<p>‘ಗಡಿ ಪ್ರದೇಶಗಳಲ್ಲಿ ಇರುವ ಲೋಪದೋಷಗಳನ್ನು ಮೊದಲು ಸರಿಪಡಿಸಿ. ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಚುರುಕುಗೊಳಿಸಬೇಕು. ಜನಸಾಮಾನ್ಯರು, ಕಾರ್ಮಿಕರು, ಗ್ರಾಹಕರು ಹಾಗೂ ಮಾಲೀಕರಿಗೆ ತೊಂದರೆಯಾಗದಂತೆ ನೋಡಿಕೊಂಡು, ಆತಿಥ್ಯ ಕ್ಷೇತ್ರ ಕುಸಿಯದಂತೆ ರಕ್ಷಿಸಬೇಕು’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕೋವಿಡ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡುವುದೇ ಪರಿಹಾರ ಅಲ್ಲ. ಅಗತ್ಯ ಮುಂಜಾಗ್ರತೆಗಳನ್ನು ಸರ್ಕಾರ ತೆಗೆದುಕೊಂಡರೆ, ಸೋಂಕು ಹರಡುವಿಕೆ ತಪ್ಪಿಸಬಹುದು’ ಎಂದು ಬೃಹತ್ ಬೆಂಗಳೂರು ಹೋಟೆಲುಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.</p>.<p>‘ಸರ್ಕಾರ ಹೋಟೆಲ್ ಮಾಲೀಕರೊಂದಿಗೆ ಚರ್ಚಿಸದೆ, ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಹಾಗೂ ಲಾಕ್ಡೌನ್ನಂತಹ ತರಾತುರಿ ನಿರ್ಣಯಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ. ವ್ಯಾಪಾರಿ ಸಮೂಹಕ್ಕೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದ್ದಾರೆ.</p>.<p>‘ಗಡಿ ಪ್ರದೇಶಗಳಲ್ಲಿ ಇರುವ ಲೋಪದೋಷಗಳನ್ನು ಮೊದಲು ಸರಿಪಡಿಸಿ. ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಚುರುಕುಗೊಳಿಸಬೇಕು. ಜನಸಾಮಾನ್ಯರು, ಕಾರ್ಮಿಕರು, ಗ್ರಾಹಕರು ಹಾಗೂ ಮಾಲೀಕರಿಗೆ ತೊಂದರೆಯಾಗದಂತೆ ನೋಡಿಕೊಂಡು, ಆತಿಥ್ಯ ಕ್ಷೇತ್ರ ಕುಸಿಯದಂತೆ ರಕ್ಷಿಸಬೇಕು’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>