<p><strong>ಬೆಂಗಳೂರು</strong>: ನಗರದಲ್ಲಿ ಸತತ ಸುರಿಯುತ್ತಿರುವ ಮಳೆಯಿಂದ ನಗರ್ತಪೇಟೆಯಲ್ಲಿ ಹಳೆಯ ಹೆಂಚಿನ ಮನೆಯೊಂದರ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.</p>.<p>ಧರ್ಮರಾಯಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಸುಮಾರು 90 ವರ್ಷ ಹಳೆಯಾದಾದ ಈ ಮನೆಯ ಒಂದು ಕಡೆಯ ಗೋಡೆ ಕುಸಿದಿದೆ. 6 ವರ್ಷದಿಂದ ಮನೆಯಲ್ಲಿ ಯಾರೂ ವಾಸ ಇರಲಿಲ್ಲ. ಹೀಗಾಗಿ, ಯಾವುದೇ ಹಾನಿಯಾಗಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಅವಶೇಷ ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಉಳಿದಿರುವ ಗೊಡೆಗಳನ್ನೂ ನೆಲಸಮ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.</p>.<p>ನಗರದಲ್ಲಿ ಕುಸಿಯುವ ಹಂತದಲ್ಲಿರುವ 185 ಮನೆಗಳ ಸರ್ವೆಯನ್ನುಎರಡು ವರ್ಷಗಳ ಹಿಂದೆಯೇ ಮಾಡಲಾಗಿದೆ. 10 ಕಟ್ಟ ನೆಲಸಮ ಮಾಡಲಾಗಿದ್ದು, ಉಳಿದವುಗಳನ್ನು ನೆಲಸಮ ಮಾಡಲು ಮತ್ತೆ ಸರ್ವೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಸತತ ಸುರಿಯುತ್ತಿರುವ ಮಳೆಯಿಂದ ನಗರ್ತಪೇಟೆಯಲ್ಲಿ ಹಳೆಯ ಹೆಂಚಿನ ಮನೆಯೊಂದರ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.</p>.<p>ಧರ್ಮರಾಯಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಸುಮಾರು 90 ವರ್ಷ ಹಳೆಯಾದಾದ ಈ ಮನೆಯ ಒಂದು ಕಡೆಯ ಗೋಡೆ ಕುಸಿದಿದೆ. 6 ವರ್ಷದಿಂದ ಮನೆಯಲ್ಲಿ ಯಾರೂ ವಾಸ ಇರಲಿಲ್ಲ. ಹೀಗಾಗಿ, ಯಾವುದೇ ಹಾನಿಯಾಗಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಅವಶೇಷ ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಉಳಿದಿರುವ ಗೊಡೆಗಳನ್ನೂ ನೆಲಸಮ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.</p>.<p>ನಗರದಲ್ಲಿ ಕುಸಿಯುವ ಹಂತದಲ್ಲಿರುವ 185 ಮನೆಗಳ ಸರ್ವೆಯನ್ನುಎರಡು ವರ್ಷಗಳ ಹಿಂದೆಯೇ ಮಾಡಲಾಗಿದೆ. 10 ಕಟ್ಟ ನೆಲಸಮ ಮಾಡಲಾಗಿದ್ದು, ಉಳಿದವುಗಳನ್ನು ನೆಲಸಮ ಮಾಡಲು ಮತ್ತೆ ಸರ್ವೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>