ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀಗ ಮುರಿದು ಕಳ್ಳತನ: ಕಪ್ಪೆ ಬಂಧನ

Last Updated 30 ಅಕ್ಟೋಬರ್ 2022, 4:42 IST
ಅಕ್ಷರ ಗಾತ್ರ

ಬೆಂಗಳೂರು: ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿ ಶಿವರಾಜ್ ಅಲಿಯಾಸ್ ಕಪ್ಪೆ (30) ಎಂಬುವವರನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ.

‘ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಶಿವರಾಜ್, ಅಪರಾಧ ಹಿನ್ನೆಲೆಯುಳ್ಳವ. ಹಲವು ಬಾರಿ ಕಳ್ಳತನ ಎಸಗಿದ್ದ. ಜೈಲಿಗೂ ಹೋಗಿ ಬಂದಿದ್ದ. ಈತನಿಂದ ₹ 5.75 ಲಕ್ಷ ಮೌಲ್ಯದ 120 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ನಗರದಲ್ಲಿ ಸುತ್ತಾಡುತ್ತಿದ್ದ ಆರೋಪಿ, ಅಂಗಣದಲ್ಲಿ ಕಸ ಬಿದ್ದಿರುತ್ತಿದ್ದ ಹಾಗೂ ರಂಗೋಲಿ ಹಾಕಿರದ ಮನೆಗಳನ್ನು ಗುರುತಿಸುತ್ತಿದ್ದ. ಹಗಲಿನಲ್ಲಿ ಬೀಗ ಮುರಿದು ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದ.’

‘ಮಾಗಡಿ ರಸ್ತೆ ಹಾಗೂ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯ ಮನೆಗಳಲ್ಲಿ ಇತ್ತೀಚೆಗೆ ಕಳ್ಳತನ ನಡೆದಿತ್ತು. ಇದರ ತನಿಖೆ ಕೈಗೊಂಡಾಗ ಆರೋಪಿ ಸಿಕ್ಕಿಬಿದ್ದ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT