<p><strong>ಕೆಂಗೇರಿ:</strong> ‘ವಸತಿ ಯೋಜನೆಯಡಿ ಯಶವಂತಪುರ ಕ್ಷೇತ್ರದ 9 ಸಾವಿರ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.</p>.<p>ಕುಂಬಳಗೋಡು ಗ್ರಾಮಪಂಚಾಯಿತಿ ಕಚೇರಿಯಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷೆ ಆಶಾ ಹಾಗೂ ಉಪಾಧ್ಯಕ್ಷರಾದ ಎನ್.ನರಸಿಂಹಮೂರ್ತಿ ಅವರನ್ನು ಅಭಿನಂದಿಸಿ ಮಾತನಾಡಿದರು.</p>.<p>‘ವಸತಿ ಯೋಜನೆಯಡಿ ಯಶವಂತಪುರ ಕ್ಷೇತ್ರದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. 18,000ಕ್ಕೂ ಹೆಚ್ಚು ಮನೆಗಳು ನಿರ್ಮಾಣ ಹಂತದಲ್ಲಿದೆ’ ಎಂದರು.</p>.<p>‘ಸುಮಾರು ₹48 ಕೋಟಿ ವೆಚ್ಚದಲ್ಲಿ ಚಿಕ್ಕನಹಳ್ಳಿ, ರಾಮೋಹಳ್ಳಿ, ಹಾಗೂ ಕುಂಬಳಗೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ 32 ಗ್ರಾಮಗಳಿಗೆ ಮಂಚನಬೆಲೆ ಜಲಾಶಯದಿಂದ ನೀರು ಹರಿಸುವ ಯೋಜನೆ ಜಾರಿಯಲ್ಲಿದೆ. ಶೀಘ್ರದಲ್ಲೇ ಈ ಎಲ್ಲಾ ಗ್ರಾಮಗಳಿಗೂ ನೀರು ಸರಬರಾಜಾಗಲಿದೆ ಎಂದರು.</p>.<p>ನಿಕಟಪೂರ್ವ ಅಧ್ಯಕ್ಷ ಚಿಕ್ಕರಾಜು, ಉಪಾಧ್ಯಕ್ಷೆ ಯಶೋಧಮ್ಮ, ಬಿಜೆಪಿ ಗ್ರಾಮಾಂತರ ಮಂಡಲ್ ಅಧ್ಯಕ್ಷ ರಂಗರಾಜು, ನಿಶಾಂತ್ ಸೋಮಶೇಖರ್, ತಾಲೂಕು ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಅನಿಲ್ ಚಳಗೇರಿ, ಪಿಡಿಒ ಬಸವರಾಜ್, ಕುಂಬಳಗೂಡು ಗ್ರಾಮ ಪಂಚಾಯಿತಿ ನೂತನ ಸದಸ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ‘ವಸತಿ ಯೋಜನೆಯಡಿ ಯಶವಂತಪುರ ಕ್ಷೇತ್ರದ 9 ಸಾವಿರ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.</p>.<p>ಕುಂಬಳಗೋಡು ಗ್ರಾಮಪಂಚಾಯಿತಿ ಕಚೇರಿಯಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷೆ ಆಶಾ ಹಾಗೂ ಉಪಾಧ್ಯಕ್ಷರಾದ ಎನ್.ನರಸಿಂಹಮೂರ್ತಿ ಅವರನ್ನು ಅಭಿನಂದಿಸಿ ಮಾತನಾಡಿದರು.</p>.<p>‘ವಸತಿ ಯೋಜನೆಯಡಿ ಯಶವಂತಪುರ ಕ್ಷೇತ್ರದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. 18,000ಕ್ಕೂ ಹೆಚ್ಚು ಮನೆಗಳು ನಿರ್ಮಾಣ ಹಂತದಲ್ಲಿದೆ’ ಎಂದರು.</p>.<p>‘ಸುಮಾರು ₹48 ಕೋಟಿ ವೆಚ್ಚದಲ್ಲಿ ಚಿಕ್ಕನಹಳ್ಳಿ, ರಾಮೋಹಳ್ಳಿ, ಹಾಗೂ ಕುಂಬಳಗೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ 32 ಗ್ರಾಮಗಳಿಗೆ ಮಂಚನಬೆಲೆ ಜಲಾಶಯದಿಂದ ನೀರು ಹರಿಸುವ ಯೋಜನೆ ಜಾರಿಯಲ್ಲಿದೆ. ಶೀಘ್ರದಲ್ಲೇ ಈ ಎಲ್ಲಾ ಗ್ರಾಮಗಳಿಗೂ ನೀರು ಸರಬರಾಜಾಗಲಿದೆ ಎಂದರು.</p>.<p>ನಿಕಟಪೂರ್ವ ಅಧ್ಯಕ್ಷ ಚಿಕ್ಕರಾಜು, ಉಪಾಧ್ಯಕ್ಷೆ ಯಶೋಧಮ್ಮ, ಬಿಜೆಪಿ ಗ್ರಾಮಾಂತರ ಮಂಡಲ್ ಅಧ್ಯಕ್ಷ ರಂಗರಾಜು, ನಿಶಾಂತ್ ಸೋಮಶೇಖರ್, ತಾಲೂಕು ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಅನಿಲ್ ಚಳಗೇರಿ, ಪಿಡಿಒ ಬಸವರಾಜ್, ಕುಂಬಳಗೂಡು ಗ್ರಾಮ ಪಂಚಾಯಿತಿ ನೂತನ ಸದಸ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>