<p><strong>ಬೆಂಗಳೂರು: ‘</strong>ಆರ್ಥಿಕವಾಗಿ ಹಿಂದುಳಿದವರು ವಸತಿಗಾಗಿ ನಿವೇಶನ ಪಡೆಯುವುದು ಸುಲಭವಾಗುವಂತೆ ಈಗಿರುವ ಭೂ ಕಂದಾಯ ಕಾನೂನನ್ನು ಸರಳಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.</p>.<p>ಯಲಹಂಕ ತಾಲ್ಲೂಕಿನ ಅಗ್ರಹಾರ ಪಾಳ್ಯದಲ್ಲಿ ವಸತಿ ಇಲಾಖೆಯ ವತಿಯಿಂದ ‘ಮುಖ್ಯಮಂತ್ರಿಗಳ ಒಂದು ಲಕ್ಷಬಹುಮಹಡಿ ಬೆಂಗಳೂರು ವಸತಿ ಯೋಜನೆ’ ಅಡಿ ಮಂಗಳವಾರ ಆಯೋಜಿಸಲಾಗಿದ್ದ ವಸತಿ ಸಮುಚ್ಚಯಗಳ ಲೋಕಾರ್ಪಣೆ, ಮನೆಗಳ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಂದಾಯ ಕಾಯ್ದೆಯಲ್ಲಿ ಮನೆ ನಿರ್ಮಿಸಲು ನಿರ್ದಿಷ್ಟ ರಿಯಾಯಿತಿಗಳಿಲ್ಲ.ಈಗಿರುವ ಕಾನೂನುಗಳಿಂದ ಜನ<br />ಸಾಮಾನ್ಯರು ನಿವೇಶನ ಖರೀದಿಸುವ ಪರಿಸ್ಥಿತಿ ಇಲ್ಲದಂತಾಗಿದೆ. ಹೀಗಾಗಿ, ಮನೆ ನಿರ್ಮಿಸಲು ಕಾನೂನಿಗೆ ತಿದ್ದುಪಡಿ ತಂದು, ನಿರ್ಬಂಧಗಳನ್ನು ತೆಗೆದು ಹಾಕಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಆರ್ಥಿಕವಾಗಿ ಹಿಂದುಳಿದವರು ವಸತಿಗಾಗಿ ನಿವೇಶನ ಪಡೆಯುವುದು ಸುಲಭವಾಗುವಂತೆ ಈಗಿರುವ ಭೂ ಕಂದಾಯ ಕಾನೂನನ್ನು ಸರಳಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.</p>.<p>ಯಲಹಂಕ ತಾಲ್ಲೂಕಿನ ಅಗ್ರಹಾರ ಪಾಳ್ಯದಲ್ಲಿ ವಸತಿ ಇಲಾಖೆಯ ವತಿಯಿಂದ ‘ಮುಖ್ಯಮಂತ್ರಿಗಳ ಒಂದು ಲಕ್ಷಬಹುಮಹಡಿ ಬೆಂಗಳೂರು ವಸತಿ ಯೋಜನೆ’ ಅಡಿ ಮಂಗಳವಾರ ಆಯೋಜಿಸಲಾಗಿದ್ದ ವಸತಿ ಸಮುಚ್ಚಯಗಳ ಲೋಕಾರ್ಪಣೆ, ಮನೆಗಳ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಂದಾಯ ಕಾಯ್ದೆಯಲ್ಲಿ ಮನೆ ನಿರ್ಮಿಸಲು ನಿರ್ದಿಷ್ಟ ರಿಯಾಯಿತಿಗಳಿಲ್ಲ.ಈಗಿರುವ ಕಾನೂನುಗಳಿಂದ ಜನ<br />ಸಾಮಾನ್ಯರು ನಿವೇಶನ ಖರೀದಿಸುವ ಪರಿಸ್ಥಿತಿ ಇಲ್ಲದಂತಾಗಿದೆ. ಹೀಗಾಗಿ, ಮನೆ ನಿರ್ಮಿಸಲು ಕಾನೂನಿಗೆ ತಿದ್ದುಪಡಿ ತಂದು, ನಿರ್ಬಂಧಗಳನ್ನು ತೆಗೆದು ಹಾಕಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>