‘ಬಡವರಿಗೆ ಮನೆ: ಕಾನೂನು ಸರಳಗೊಳಿಸಲು ಕ್ರಮ’

ಬೆಂಗಳೂರು: ‘ಆರ್ಥಿಕವಾಗಿ ಹಿಂದುಳಿದವರು ವಸತಿಗಾಗಿ ನಿವೇಶನ ಪಡೆಯುವುದು ಸುಲಭವಾಗುವಂತೆ ಈಗಿರುವ ಭೂ ಕಂದಾಯ ಕಾನೂನನ್ನು ಸರಳಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಯಲಹಂಕ ತಾಲ್ಲೂಕಿನ ಅಗ್ರಹಾರ ಪಾಳ್ಯದಲ್ಲಿ ವಸತಿ ಇಲಾಖೆಯ ವತಿಯಿಂದ ‘ಮುಖ್ಯಮಂತ್ರಿಗಳ ಒಂದು ಲಕ್ಷಬಹುಮಹಡಿ ಬೆಂಗಳೂರು ವಸತಿ ಯೋಜನೆ’ ಅಡಿ ಮಂಗಳವಾರ ಆಯೋಜಿಸಲಾಗಿದ್ದ ವಸತಿ ಸಮುಚ್ಚಯಗಳ ಲೋಕಾರ್ಪಣೆ, ಮನೆಗಳ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಕಂದಾಯ ಕಾಯ್ದೆಯಲ್ಲಿ ಮನೆ ನಿರ್ಮಿಸಲು ನಿರ್ದಿಷ್ಟ ರಿಯಾಯಿತಿಗಳಿಲ್ಲ.ಈಗಿರುವ ಕಾನೂನುಗಳಿಂದ ಜನ
ಸಾಮಾನ್ಯರು ನಿವೇಶನ ಖರೀದಿಸುವ ಪರಿಸ್ಥಿತಿ ಇಲ್ಲದಂತಾಗಿದೆ. ಹೀಗಾಗಿ, ಮನೆ ನಿರ್ಮಿಸಲು ಕಾನೂನಿಗೆ ತಿದ್ದುಪಡಿ ತಂದು, ನಿರ್ಬಂಧಗಳನ್ನು ತೆಗೆದು ಹಾಕಲಾಗುವುದು ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.