<p><strong>ಪೀಣ್ಯ ದಾಸರಹಳ್ಳಿ</strong>: ‘ಒಂಟಿ ಮನೆ ನಿರ್ಮಿಸಿಕೊಳ್ಳಲು ಫಲಾನುಭವಿಗಳಿಗೆ ಹಂತ ಹಂತವಾಗಿ ಸರ್ಕಾರ ₹ 5 ಲಕ್ಷ ಸಹಾಯಧನ ನೀಡುತ್ತಿದ್ದು, ಇದನ್ನು ಪಡೆಯುವುದಕ್ಕಾಗಿ ಯಾರಿಗೂ ಲಂಚ ಕೊಡಬೇಡಿ' ಎಂದು ಶಾಸಕ ಎಸ್. ಮುನಿರಾಜು ಫಲಾನುಭವಿಗಳಿಗೆ ಮನವಿ ಮಾಡಿದರು.</p>.<p>ಶೆಟ್ಟಿಹಳ್ಳಿಯ ತಮ್ಮ ಕಚೇರಿ ಆವರಣದಲ್ಲಿ ಒಂಟಿ ಮನೆ ಫಲಾನುಭವಿಗಳಿಗೆ ಮನೆ ನಿರ್ಮಾಣದ ಕಾರ್ಯಾದೇಶ ಪತ್ರ ವಿತರಿಸಿ ಅವರು ಮಾತನಾಡಿದರು.</p>.<p>‘ಕಟ್ಟಡ ನಿರ್ಮಾಣದ ನಾಲ್ಕು ಹಂತಗಳಲ್ಲಿ ಸರ್ಕಾರದಿಂದ ಸಹಾಯಧನ ಸಿಗಲಿದೆ. ಸರ್ಕಾರ ನಿಗದಿಪಡಿಸಿರುವ ಪ್ರತಿ ಹಂತದಲ್ಲಿ ಮನೆ ನಿರ್ಮಾಣದ ಫೋಟೊ ತೆಗೆಸಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿಸಿದರೆ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ. ಅಧಿಕಾರಿಗಳು ಈ ವೇಳೆ ಲಂಚಕ್ಕೆ ಬೇಡಿಕೆ ಇಟ್ಟರೆ ನನಗೆ ಕರೆ ಮಾಡಿ’ ಎಂದು ತಿಳಿಸಿದರು.</p>.<p>‘ಸರ್ಕಾರ ನೀಡುವ ಹಣದ ಜತೆಗೆ ನಿಮ್ಮ ಹಣವನ್ನೂ ಸೇರಿಸಿ ಗುಣಮಟ್ಟದ ಚಿಕ್ಕ, ಚೊಕ್ಕ ಸುಭದ್ರವಾದ ಮನೆಯನ್ನು ನಿರ್ಮಿಸಿಕೊಂಡು ನೆಮ್ಮದಿಯಾಗಿರಿ’ ಎಂದರು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಆರ್ಥಿಕವಾಗಿ ಹಿಂದುಳಿದ ಸುಮಾರು 135 ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ</strong>: ‘ಒಂಟಿ ಮನೆ ನಿರ್ಮಿಸಿಕೊಳ್ಳಲು ಫಲಾನುಭವಿಗಳಿಗೆ ಹಂತ ಹಂತವಾಗಿ ಸರ್ಕಾರ ₹ 5 ಲಕ್ಷ ಸಹಾಯಧನ ನೀಡುತ್ತಿದ್ದು, ಇದನ್ನು ಪಡೆಯುವುದಕ್ಕಾಗಿ ಯಾರಿಗೂ ಲಂಚ ಕೊಡಬೇಡಿ' ಎಂದು ಶಾಸಕ ಎಸ್. ಮುನಿರಾಜು ಫಲಾನುಭವಿಗಳಿಗೆ ಮನವಿ ಮಾಡಿದರು.</p>.<p>ಶೆಟ್ಟಿಹಳ್ಳಿಯ ತಮ್ಮ ಕಚೇರಿ ಆವರಣದಲ್ಲಿ ಒಂಟಿ ಮನೆ ಫಲಾನುಭವಿಗಳಿಗೆ ಮನೆ ನಿರ್ಮಾಣದ ಕಾರ್ಯಾದೇಶ ಪತ್ರ ವಿತರಿಸಿ ಅವರು ಮಾತನಾಡಿದರು.</p>.<p>‘ಕಟ್ಟಡ ನಿರ್ಮಾಣದ ನಾಲ್ಕು ಹಂತಗಳಲ್ಲಿ ಸರ್ಕಾರದಿಂದ ಸಹಾಯಧನ ಸಿಗಲಿದೆ. ಸರ್ಕಾರ ನಿಗದಿಪಡಿಸಿರುವ ಪ್ರತಿ ಹಂತದಲ್ಲಿ ಮನೆ ನಿರ್ಮಾಣದ ಫೋಟೊ ತೆಗೆಸಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿಸಿದರೆ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ. ಅಧಿಕಾರಿಗಳು ಈ ವೇಳೆ ಲಂಚಕ್ಕೆ ಬೇಡಿಕೆ ಇಟ್ಟರೆ ನನಗೆ ಕರೆ ಮಾಡಿ’ ಎಂದು ತಿಳಿಸಿದರು.</p>.<p>‘ಸರ್ಕಾರ ನೀಡುವ ಹಣದ ಜತೆಗೆ ನಿಮ್ಮ ಹಣವನ್ನೂ ಸೇರಿಸಿ ಗುಣಮಟ್ಟದ ಚಿಕ್ಕ, ಚೊಕ್ಕ ಸುಭದ್ರವಾದ ಮನೆಯನ್ನು ನಿರ್ಮಿಸಿಕೊಂಡು ನೆಮ್ಮದಿಯಾಗಿರಿ’ ಎಂದರು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಆರ್ಥಿಕವಾಗಿ ಹಿಂದುಳಿದ ಸುಮಾರು 135 ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>