<p><strong>ಬೆಂಗಳೂರು: </strong>ಅಲೆಮಾರಿ ಜನಾಂಗಕ್ಕೆ ಸಮುದಾಯ ವಸತಿ ಯೋಜನೆಯಡಿ 69 ಸಾವಿರ ಮನೆಗಳನ್ನು ಕಟ್ಟಿಕೊಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.</p>.<p>ರಾಮಮಂದಿರ ಭೂಮಿ ಪೂಜೆಯ ನೆನಪಿನಲ್ಲಿ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಆ ಪೈಕಿ ಅಲೆಮಾರಿಗಳಿಗೆ ಮನೆ ಕಟ್ಟಿಸಿಕೊಡುವುದೂ ಪ್ರಮುಖ ಯೋಜನೆ. ಮೊದಲ ಹಂತದಲ್ಲಿ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಯೋಜನೆ ಜಾರಿ ಮಾಡಲಾಗುವುದು ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಅರ್ಹ ಫಲಾನುಭವಿಗಳಿಗೆ ಮುಂದಿನ 20–25 ದಿನಗಳಲ್ಲಿ ಈ ಸಂಬಂಧ ಆದೇಶ ಪತ್ರ ನೀಡಲಾಗುವುದು. ಪ್ರತಿ ಫಲಾನುಭವಿಗಳಿಗೂ ತಲಾ ₹1.20 ಲಕ್ಷದಂತೆ 4 ಕಂತುಗಳಲ್ಲಿ ಮನೆ ನಿರ್ಮಾಣಕ್ಕೆ ಹಣ ನೀಡಲಾಗುವುದು. ಸರ್ಕಾರ ಹಣ ಕೊಡುತ್ತದೆ, ಫಲಾನುಭವಿಗಳು ತಮ್ಮ ಇಚ್ಛೆಯ ಪ್ರಕಾರ ಮನೆಗಳನ್ನು ಕಟ್ಟಿಕೊಳ್ಳಬೇಕು ಎಂದು ಸೋಮಣ್ಣ ಹೇಳಿದರು.</p>.<p>ರಾಮಮಂದಿರ ನಿರ್ಮಿಸಬೇಕು ಎಂಬುದು ಭಾರತೀಯರ ಐದು ಶತಮಾನಗಳ ಕನಸಾಗಿತ್ತು. ಅದು ಈಗ ಸಾಕಾರಗೊಳ್ಳುತ್ತಿದೆ. ಇದಕ್ಕಾಗಿ ಶ್ರಮಿಸಿದ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಸಂಖ್ಯ ರಾಮಭಕ್ತರಿಗೆ ಗೌರವ ಸಮರ್ಪಿಸಬೇಕು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಲೆಮಾರಿ ಜನಾಂಗಕ್ಕೆ ಸಮುದಾಯ ವಸತಿ ಯೋಜನೆಯಡಿ 69 ಸಾವಿರ ಮನೆಗಳನ್ನು ಕಟ್ಟಿಕೊಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.</p>.<p>ರಾಮಮಂದಿರ ಭೂಮಿ ಪೂಜೆಯ ನೆನಪಿನಲ್ಲಿ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಆ ಪೈಕಿ ಅಲೆಮಾರಿಗಳಿಗೆ ಮನೆ ಕಟ್ಟಿಸಿಕೊಡುವುದೂ ಪ್ರಮುಖ ಯೋಜನೆ. ಮೊದಲ ಹಂತದಲ್ಲಿ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಯೋಜನೆ ಜಾರಿ ಮಾಡಲಾಗುವುದು ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಅರ್ಹ ಫಲಾನುಭವಿಗಳಿಗೆ ಮುಂದಿನ 20–25 ದಿನಗಳಲ್ಲಿ ಈ ಸಂಬಂಧ ಆದೇಶ ಪತ್ರ ನೀಡಲಾಗುವುದು. ಪ್ರತಿ ಫಲಾನುಭವಿಗಳಿಗೂ ತಲಾ ₹1.20 ಲಕ್ಷದಂತೆ 4 ಕಂತುಗಳಲ್ಲಿ ಮನೆ ನಿರ್ಮಾಣಕ್ಕೆ ಹಣ ನೀಡಲಾಗುವುದು. ಸರ್ಕಾರ ಹಣ ಕೊಡುತ್ತದೆ, ಫಲಾನುಭವಿಗಳು ತಮ್ಮ ಇಚ್ಛೆಯ ಪ್ರಕಾರ ಮನೆಗಳನ್ನು ಕಟ್ಟಿಕೊಳ್ಳಬೇಕು ಎಂದು ಸೋಮಣ್ಣ ಹೇಳಿದರು.</p>.<p>ರಾಮಮಂದಿರ ನಿರ್ಮಿಸಬೇಕು ಎಂಬುದು ಭಾರತೀಯರ ಐದು ಶತಮಾನಗಳ ಕನಸಾಗಿತ್ತು. ಅದು ಈಗ ಸಾಕಾರಗೊಳ್ಳುತ್ತಿದೆ. ಇದಕ್ಕಾಗಿ ಶ್ರಮಿಸಿದ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಸಂಖ್ಯ ರಾಮಭಕ್ತರಿಗೆ ಗೌರವ ಸಮರ್ಪಿಸಬೇಕು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>