ಸೂರ್ಯನಗರ ಯೋಜನೆ ಸೇರಿದ ಯೋಜನೆಗಳಿಗೆ 4,615 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಈ ಪೈಕಿ ಸೂರ್ಯ ನಗರ ನಾಲ್ಕನೇ ಹಂತದ 700 ಎಕರೆ ಸೇರಿದಂತೆ ಒಟ್ಟು ಒಂದು ಸಾವಿರ ಎಕರೆಗೆ ಸಂಬಂಧಿಸಿದ ವ್ಯಾಜ್ಯದಿಂದ ಯೋಜನೆಗಳಿಗೆ ಗ್ರಹಣ ಹಿಡಿದಂತಾಗಿದೆ. ಹೀಗಾಗಿ ರೈತರು ಹಾಗೂ ಜಮೀನು ಮಾಲೀಕರ ಜತೆ ಸಮಾಲೋಚನೆ ನಡೆಸಿ ಇತ್ಯರ್ಥ ಪಡಿಸಿ ಯೋಜನೆಗಳಿಗೆ ವೇಗ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.