ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡ ಯೋಗೇಂದ್ರ ಯಾದವ್, ‘ದೊರೆಸ್ವಾಮಿ ಅವರನ್ನು ಜೀವನದಲ್ಲಿ ಒಮ್ಮೆ ಭೇಟಿ ಮಾಡುವುದೇ ಅದೃಷ್ಟ. ಅವರನ್ನು ಐದಾರು ಬಾರಿ ಭೇಟಿಯಾಗಿರುವ ನಾನು ನಿಜಕ್ಕೂ ಭಾಗ್ಯವಂತ. ಅವರು ನನ್ನ ಹೆಗಲ ಮೇಲೆ ಕೈಯಿಟ್ಟು ಮಾತನಾಡುತ್ತಿದ್ದಾಗಒಂದು ಬಗೆಯ ಪುಳಕ ಉಂಟಾಗುತ್ತಿತ್ತು. ಅವರ ಹೋರಾಟ ಬ್ರಿಟಿಷರ ವಿರುದ್ಧವಷ್ಟೇ ಸೀಮಿತವಾಗಿರಲಿಲ್ಲ. ಇಳಿ ವಯಸ್ಸಿನಲ್ಲೂ ಅವರು ಭ್ರಷ್ಟ ವ್ಯವಸ್ಥೆಯ ವಿರುದ್ಧ ಸಿಡಿದೇಳುತ್ತಿದ್ದರು.ಅವರಿಗೆ ಅಗಾಧವಾದ ನೆನಪಿನ ಶಕ್ತಿ ಇತ್ತು. ಸಣ್ಣ ಸಣ್ಣ ಘಟನೆಗಳನ್ನೂ ನೆನಪು ಮಾಡಿಕೊಂಡು ನಮ್ಮ ಜೊತೆ ಹಂಚಿಕೊಳ್ಳುತ್ತಿದ್ದರು’ ಎಂದು ಅವರು ಸ್ಮರಿಸಿದರು.