ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಣಯ ವಾಪಸ್‌ ಪಡೆದ ಹುಬ್ಬಳ್ಳಿ ವಕೀಲರ ಸಂಘ

Last Updated 17 ಮಾರ್ಚ್ 2020, 21:04 IST
ಅಕ್ಷರ ಗಾತ್ರ

ಬೆಂಗಳೂರು: ‘ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ಕೂಗಿದ ಆರೋಪದಲ್ಲಿ ಬಂಧಿತರಾಗಿರುವ ಹುಬ್ಬಳ್ಳಿಯ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ಹಾಕದಿರಲು ಫೆಬ್ರುವರಿ 15ರಂದು ಕೈಗೊಂಡಿದ್ದ ನಿರ್ಣಯವನ್ನು ಹುಬ್ಬಳ್ಳಿ ವಕೀಲರ ಸಂಘ ವಾಪಸು ಪಡೆದಿದೆ.

ಈ ಕುರಿತ ಪ್ರಮಾಣ ಪತ್ರವನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮಂಗಳವಾರ ಸಲ್ಲಿಸಿದೆ.

ಪ್ರಮಾಣ ಪತ್ರ ದಾಖಲಿಸಿಕೊಂಡ ನ್ಯಾಯಪೀಠ, ‘ಕೋರ್ಟ್ ಆವರಣದಲ್ಲಿ ಗಲಭೆ ನಡೆದ ಬಗ್ಗೆ ಈಗಾಗಲೇ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ಈ ಹಂತದಲ್ಲಿ ಯಾವುದೇ ನಿರ್ದೇಶನ ನೀಡುವುದಿಲ್ಲ’ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT