ನಗರ ಪಾಲಿಕೆ ಸದಸ್ಯರಾಗಿ, ಮೇಯರ್ ಆಗಿ ಸೇವೆ ಸಲ್ಲಿಸಿರುವ ಜೆ.ಹುಚ್ಚಪ್ಪನವರು ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದವರು. ಹಲವು ಪ್ರಮುಖ ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸಿರುವ ಅವರು ಕನ್ನಡಪರ ಸಾಧಕರನ್ನು ಗುರುತಿಸುವಲ್ಲಿ ಮುಖ್ಯ ಪಾತ್ರವಹಿಸಿದ್ದರು. ನಾಡು-ನುಡಿಯ ವಿಚಾರಗಳ ಹೋರಾಟಗಳಲ್ಲಿ ಸದಾ ಮುಂದಾಳತ್ವ ವಹಿಸುವ ಅವರು ಸಾಮಾಜಿಕ ಚಳವಳಿಗಳಲ್ಲಿ ಕೂಡ ತಮ್ಮನ್ನು ತೊಡಗಿಸಿಕೊಂಡವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.