<p><strong>ನೆಲಮಂಗಲ</strong>: ಉತ್ತರ ತಾಲ್ಲೂಕು ಮಾಕಳಿಯಲ್ಲಿ ಗೋದಾಮುಗಳಿಗೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ದಾಸ್ತಾನುಗಳು ಸುಟ್ಟು ಕರಕಲಾಗಿವೆ.</p>.<p>ಭಾನುವಾರ ರಜಾ ದಿನವಾದ ಕಾರಣ ಹೆಚ್ಚಿನ ಸಿಬ್ಬಂದಿ ಇರಲಿಲ್ಲ. ಬೆಳಿಗ್ಗೆ 11.30 ರ ಸುಮಾರಿಗೆ ಸುಗಂಧ ದ್ರವ್ಯ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಅಕ್ಕ ಪಕ್ಕದ ಹವಾನಿಯಂತ್ರಕ, ನಾಯಿಗಳಿಗೆ ನೀಡುವ ಸಂಸ್ಕರಿಸಿದ ಆಹಾರ, ಅನಿಲ ಸಿಲಿಂಡರ್ಗಳ ಗೋದಾಮಿಗೂ ವ್ಯಾಪಿಸಿದೆ. ಸಿಲಿಂಡರ್ಗಳನ್ನು ತಕ್ಷಣ ಸ್ಥಳಾಂತರಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.</p>.<p>ಸ್ಥಳಕ್ಕೆ ಬಂದ ಅಗ್ನಿಶಾಮಕದಳದವರು 10ಕ್ಕೂ ಹೆಚ್ಚು ವಾಹನಗಳನ್ನು ಬಳಸಿ ಬೆಂಕಿ ನಂದಿಸಲು ಯಶಸ್ವಿಯಾದರು.</p>.<p>ಬೆಂಕಿಯ ಕೆನ್ನಾಲಗೆ, ದಟ್ಟ ಹೊಗೆಯನ್ನು ಗಮನಿಸಿದ ಅಕ್ಕಪಕ್ಕದ ಗ್ರಾಮಸ್ಥರು, ಸಾರ್ವಜನಿಕರು ಗೋದಾಮಿನ ಬಳಿ ಬಂದಿದ್ದರು. </p>.<p>‘ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಗೋದಾಮಿನಲ್ಲಿ ಅಳವಡಿಸಿರುವ ಅಗ್ನಿಶಾಮಕ ಉಪಕರಣಗಳ ಸಹಾಯದಿಂದ ಸಿಬ್ಬಂದಿ ನಂದಿಸಿದ್ದರೆ ಇಷ್ಟು ದೊಡ್ಡ ಪ್ರಮಾಣದ ಅನಾಹುತ ಸಂಭವಿಸುತ್ತಿರಲಿಲ್ಲ. ಪಕ್ಕದಲ್ಲೇ ಇದ್ದ ಒಟ್ಟು ನಾಲ್ಕು ಗೋದಾಮುಗಳು ಹೊತ್ತಿ ಉರಿದಿವೆ’ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>: ಉತ್ತರ ತಾಲ್ಲೂಕು ಮಾಕಳಿಯಲ್ಲಿ ಗೋದಾಮುಗಳಿಗೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ದಾಸ್ತಾನುಗಳು ಸುಟ್ಟು ಕರಕಲಾಗಿವೆ.</p>.<p>ಭಾನುವಾರ ರಜಾ ದಿನವಾದ ಕಾರಣ ಹೆಚ್ಚಿನ ಸಿಬ್ಬಂದಿ ಇರಲಿಲ್ಲ. ಬೆಳಿಗ್ಗೆ 11.30 ರ ಸುಮಾರಿಗೆ ಸುಗಂಧ ದ್ರವ್ಯ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಅಕ್ಕ ಪಕ್ಕದ ಹವಾನಿಯಂತ್ರಕ, ನಾಯಿಗಳಿಗೆ ನೀಡುವ ಸಂಸ್ಕರಿಸಿದ ಆಹಾರ, ಅನಿಲ ಸಿಲಿಂಡರ್ಗಳ ಗೋದಾಮಿಗೂ ವ್ಯಾಪಿಸಿದೆ. ಸಿಲಿಂಡರ್ಗಳನ್ನು ತಕ್ಷಣ ಸ್ಥಳಾಂತರಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.</p>.<p>ಸ್ಥಳಕ್ಕೆ ಬಂದ ಅಗ್ನಿಶಾಮಕದಳದವರು 10ಕ್ಕೂ ಹೆಚ್ಚು ವಾಹನಗಳನ್ನು ಬಳಸಿ ಬೆಂಕಿ ನಂದಿಸಲು ಯಶಸ್ವಿಯಾದರು.</p>.<p>ಬೆಂಕಿಯ ಕೆನ್ನಾಲಗೆ, ದಟ್ಟ ಹೊಗೆಯನ್ನು ಗಮನಿಸಿದ ಅಕ್ಕಪಕ್ಕದ ಗ್ರಾಮಸ್ಥರು, ಸಾರ್ವಜನಿಕರು ಗೋದಾಮಿನ ಬಳಿ ಬಂದಿದ್ದರು. </p>.<p>‘ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಗೋದಾಮಿನಲ್ಲಿ ಅಳವಡಿಸಿರುವ ಅಗ್ನಿಶಾಮಕ ಉಪಕರಣಗಳ ಸಹಾಯದಿಂದ ಸಿಬ್ಬಂದಿ ನಂದಿಸಿದ್ದರೆ ಇಷ್ಟು ದೊಡ್ಡ ಪ್ರಮಾಣದ ಅನಾಹುತ ಸಂಭವಿಸುತ್ತಿರಲಿಲ್ಲ. ಪಕ್ಕದಲ್ಲೇ ಇದ್ದ ಒಟ್ಟು ನಾಲ್ಕು ಗೋದಾಮುಗಳು ಹೊತ್ತಿ ಉರಿದಿವೆ’ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>