‘ದೂರುದಾರರು ಬೇಗೂರಿನ ಕೊಪ್ಪ ರಸ್ತೆಯಲ್ಲಿ ಅಂಗಡಿ ಇಟ್ಟುಕೊಂಡಿದ್ದಾರೆ. ಗುರುವಾರ ರಾತ್ರಿ 10 ಗಂಟೆಗೆ ವ್ಯಾಪಾರ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಹೊರಟಿದ್ದರು. ಪಲ್ಸರ್ ಬೈಕ್ನಲ್ಲಿ ಬಂದಿದ್ದ ಇಬ್ಬರು, ವಿಳಾಸ ಕೇಳುವ ನೆಪದಲ್ಲಿ ಅಡ್ಡಗಟ್ಟಿದ್ದರು. ನಂತರ ಚಾಕು ತೋರಿಸಿ ಬೆದರಿಸಿದ್ದರು. ಮೊಬೈಲ್ ಹಾಗೂ ಡಿಕ್ಕಿಯಲ್ಲಿದ್ದ ₹ 35 ಸಾವಿರ ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದಾರೆ’ ಎಂದೂ ತಿಳಿಸಿದರು.