‘ಶೇಷಾದ್ರಿಪುರ ನಿವಾಸಿ ಶ್ರೀಧರ್ ಅವರನ್ನು ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ’ ಎಂದು ಆರೋಪಿಸಿ ಅವರ ಮಗ ಚಂದರೇಶ್, ಆಯೋಗಕ್ಕೆ ದೂರು ನೀಡಿದ್ದರು. ಅದನ್ನು ಗಂಭೀರವಾಗಿ ಪರಿಗಣಿಸಿದ್ದ ಆಯೋಗ, ತನಿಖೆ ನಡೆಸುವಂತೆ ಐಜಿಪಿ ಅವರಿಗೆ ಸೂಚಿಸಿತ್ತು. ಡಿವೈಎಸ್ಪಿ ನೇತೃತ್ವದ ತಂಡ ಠಾಣೆ ಮೇಲೆ ಶುಕ್ರವಾರ (ಜ. 20) ದಾಳಿ ಮಾಡಿ, ಶ್ರೀಧರ್ ಅವರನ್ನು ರಕ್ಷಿಸಿತ್ತು. ಠಾಣೆಯಲ್ಲಿದ್ದ ದಾಖಲೆಗಳನ್ನು ಜಪ್ತಿ ಮಾಡಿತ್ತು.