ಕಾಮನ್ ವೆಲ್ತ್ ಮಾನವ ಹಕ್ಕುಗಳ ಸಂಘದ ನಿರ್ದೇಶಕ ವೆಂಕಟೇಶ ನಾಯಕ್ ಮಾತನಾಡಿ, ‘ಮಾನವ ಹಕ್ಕುಗಳ ಸಂರಕ್ಷಣೆಯಲ್ಲಿ ಮಾಧ್ಯಮದ ಪಾತ್ರ ಬಹಳ ಮಹತ್ವದ್ದು. ಮಾಹಿತಿ ಹಕ್ಕು ಕಾಯ್ದೆ ಮತ್ತು ಪತ್ರಿಕಾ ಸ್ವಾತಂತ್ರ್ಯದ ಪರಿಣಾಮಕಾರಿ ಬಳಕೆ ಮಾನವ ಹಕ್ಕುಗಳ ಸಂರಕ್ಷಣೆಗೆ ಪೂರಕವಾಗಬಲ್ಲದು. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘೋಷಣೆಗೆ ಅನುಗುಣವಾಗಿ ಭಾರತ ಜಾರಿಗೊಳಿಸಿರುವ ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸಬೇಕಿದೆ’ ಎಂದು ಹೇಳಿದರು.